ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ: ಶುಕ್ರವಾರ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಕೃಷ್ಣ ಮಾತುಕತೆ

By Staff
|
Google Oneindia Kannada News

ಸಿಇಟಿ: ಶುಕ್ರವಾರ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಕೃಷ್ಣ ಮಾತುಕತೆ
ವಿದ್ಯಾರ್ಥಿಗಳ ಹಿತರಕ್ಷಣೆಗೆ ಸರ್ಕಾರದ ಒತ್ತು

ಬೆಂಗಳೂರು : ಸುಪ್ರಿಂಕೋರ್ಟಿನ ತೀರ್ಪಿನ ಮೂಲಕ ಉದ್ಭವಿಸಿರುವ ಪರಿಸ್ಥಿತಿಯಲ್ಲಿ , ವೃತ್ತಿಪರ ಶಿಕ್ಷಣ ಸೀಟು ಹಂಚಿಕೆ ಸಂಬಂಧ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಆಗಸ್ಟ್‌ 22 ರಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವರು.

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಹಿತರಕ್ಷಣೆ ಕುರಿತು ಆ.22ರ ಸಭೆಯಲ್ಲಿ ಮುಖ್ಯಮಂತ್ರಿ ಕೃಷ್ಣ ಒತ್ತು ನೀಡುವ ನಿರೀಕ್ಷೆಯಿದೆ. ಸರ್ಕಾರದೊಂದಿಗೆ ಭಿನ್ನಮತ ಹೊಂದಿದ್ದ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾಮೆಡ್‌-ಕೆ ಸೇರಿದಂತೆ ಎಲ್ಲಾ ಖಾಸಗಿ ಸಂಸ್ಥೆಗಳ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಮಾತುಕತೆಗೆ ಆಹ್ವಾನಿಸಿದ್ದಾರೆ ಎಂದು ಮುಖ್ಯಮಂತ್ರಿಳ ಕಚೇರಿ ಮೂಲಗಳು ತಿಳಿಸಿವೆ.

ಈ ಮುನ್ನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸೀಟುಗಳಿಗೆ ಪ್ರತಿಶತ 75ರಷ್ಟು ಪ್ರವೇಶ ಪ್ರಕ್ರಿಯೆಯನ್ನು ಸರ್ಕಾರ ಪೂರೈಸಿದೆ. ಈ ಸಂದರ್ಭದಲ್ಲಿ ಸುಪ್ರಿಂಕೋರ್ಟ್‌ ನೀಡಿರುವ ತೀರ್ಪಿನಿಂದಾಗಿ ಪ್ರವೇಶ ಪ್ರಕ್ರಿಯೆಯನ್ನು ಹೊಸತಾಗಿ ಮಾಡುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X