ದಯವಿಟ್ಟು ಆತ್ಮಹತ್ಯೆ ಮಾಡಿಕೊಳ್ಳಬೇಡಿ- ರೈತರಲ್ಲಿ ಕೃಷ್ಣ ಮನವಿ
ದಯವಿಟ್ಟು ಆತ್ಮಹತ್ಯೆ ಮಾಡಿಕೊಳ್ಳಬೇಡಿ- ರೈತರಲ್ಲಿ ಕೃಷ್ಣ ಮನವಿ
ರೈತರ ನೆರವಿಗೆ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್
ರಾಜ್ಯದಲ್ಲಿ ಮೂರು ವರ್ಷಗಳಿಂದ ಬರ ತಾಂಡವವಾಡುತ್ತಿದೆ. ತೀವ್ರ ಬರದಿಂದಾಗಿ ದುಸ್ಥಿತಿಯಲ್ಲಿರುವ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ರೂಪಿಸುವುದು ಎಂದು ಕೃಷ್ಣ ಹೇಳಿದರು. ಪ್ರದೇಶ ಕಾಂಗ್ರೆಸ್ ಸಮಿತಿ ಬುಧವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ರಾಜೀವ್ಗಾಂಧಿ ಹಾಗೂ ದೇವರಾಜ ಅರಸು ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಕೃಷ್ಣ ಮಾತನಾಡುತ್ತಿದ್ದರು.
ಕೃಷ್ಣ ಅವರ ಭಾಷಣದ ಮುಖ್ಯಾಂಶಗಳು :
- ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ 1 ಲಕ್ಷ ರುಪಾಯಿ ಪರಿಹಾರ ಧನ ನೀಡಲಾಗುವುದು. ಪರಿಹಾರ ಧನ 15 ದಿನಗಳಲ್ಲಿ ಸಂತ್ರಸ್ತರಿಗೆ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು.
- ರೈತರ ಸಾಲ ವಸೂಲಾತಿಗಾಗಿ ಜಮೀನು, ಟ್ರ್ಯಾಕ್ಟರ್ ಮುಂತಾದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡದಂತೆ ಆದೇಶ ಹೊರಡಿಸಲಾಗುವುದು.
- ಸಾಲ ವಸೂಲಾತಿಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗುವುದು.
- ಸಹಕಾರ ಸಂಘಗಳಿಂದ ರೈತರು ಪಡೆದ ಸಾಲದ ಬಡ್ಡಿ ಮನ್ನಾ ಮಾಡಲಾಗುವುದು. ಈಗಾಗಲೇ ಬಡ್ಡಿಯನ್ನು ಪಾವತಿ ಮಾಡಿರುವ ರೈತರಿಗೆ, ಪಾವತಿಸಿದ ಬಡ್ಡಿಯ ಹಣ ವಾಪಸ್ಸು ಮಾಡಲಾಗುವುದು.
ರೈತರ ಬವಣೆ ನೀಗಿಸಲು ಸರ್ಕಾರ ವಿಶೇಷ ಪ್ಯಾಕೇಜ್ ರೂಪಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಅವರೊಂದಿಗೆ ಚರ್ಚಿಸುತ್ತೇನೆ. ಆ.25ರ ಸಂಪುಟ ಸಭೆಯಲ್ಲಿ ಪ್ಯಾಕೇಜ್ ಕುರಿತು ಚರ್ಚಿಸಲಾಗುವುದು ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications