ಪುಸ್ತಕ ಪೇಟೆ ಮಾತು -‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’
ಪುಸ್ತಕ ಪೇಟೆ ಮಾತು -‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’
‘ಕಾವೇರಿ’ ಕುರಿತೊಂದು ಸಮಗ್ರ ಪುಸ್ತಕ
‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’.
ಪುಸ್ತಕಪೇಟೆಯಲ್ಲೀಗ ಶೇಷನಾರಾಯಣ ಬರೆದ ‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’ ಪುಸ್ತಕದ್ದೇ ಮಾತು. ಹಿರಿಯ ಲೇಖಕ ಶೇಷನಾರಾಯಣ ಈ ಪುಸ್ತಕಕ್ಕಾಗಿ ಪಟ್ಟ ಶ್ರಮ ಒಂದೆರಡಲ್ಲ . ಎಂಜಿನಿಯರುಗಳಿಂದ ಮಾಹಿತಿ ಪಡೆದಿದ್ದಾರೆ. ಕಾವೇರಿ ಹರಿಯುವ ಪ್ರಾಂತ್ಯದಲ್ಲೆಲ್ಲ ಸಂಚರಿಸಿ ನದಿಯಲೆಗೆ ಕಿವಿ ಕೊಟ್ಟಿದ್ದಾರೆ. ತಮಿಳು ಭಾಷೆಯನ್ನೂ ಬಲ್ಲ ಶೇಷನಾರಾಯಣ, ತಮಿಳರಿಂದ ಅಂಕಿ ಅಂಶಗಳನ್ನೂ ಹೆಕ್ಕಿದ್ದಾರೆ. ತಮಿಳುನಾಡಿನ ತಂಜಾವೂರು ಪ್ರದೇಶಕ್ಕೆ ಭೇಟಿ ನೀಡಿ ಸತ್ಯಾಸತ್ಯ ನ್ಯಾಯಾನ್ಯಾಯಗಳ ಪರಿಶೀಲಿಸಿದ್ದಾರೆ.
‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’ ಕೃತಿ ಏಕಕಾಲಕ್ಕೆ ಐತಿಹಾಸಿಕವೂ ವರ್ತಮಾನವೂ ಸ್ವಲ್ಪಮಟ್ಟಿಗೆ ಪುರಾಣವೂ ಹೌದು. ಕೇಶಿರಾಜನ ಶಬ್ದಮಣಿ ದರ್ಪಣದಲ್ಲಿನ ಕಾವೇರಿಯ ಉಲ್ಲೇಖ, ಕಾವೇರಿ ರಾಜಕಾರಣ ಬೆಳೆದು ಬಂದ ಬಗೆ, ಕಾವೇರಿ ಹಾಗೂ ವಿಶ್ವೇಶ್ವರಯ್ಯ, ಕಾವೇರಿ ನೀರಿಗಾಗಿ ಹೋರಾಟ, ಹಾಹಾಕಾರ, ಪರಿಸರ- ಪರಿಹಾರ, ಈ ಪರಿಯಾಗಿ ‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’ ಪುಸ್ತಕಕ್ಕೆ ಹಲವು ಆಯಾಮಗಳಿವೆ.
ಕಾವೇರಿ ನದಿ ಹಾಗೂ ನದಿಗೆ ಕಟ್ಟಿದ ಜಲಾಶಯಗಳು ಹಾಗೂ ಕಾವೇರಿಗೆ ಸಂಬಂಧಿಸಿದ ಇತರ ಚಿತ್ರಗಳನ್ನು ಪುಸ್ತಕದಲ್ಲಿ ಔಚಿತ್ಯಪೂರ್ಣವಾಗಿ ಬಳಸಿಕೊಳ್ಳಲಾಗಿದೆ. ಸಂಶೋಧನೆ, ವಿಮರ್ಶೆ, ಅವಲೋಕನ, ವಸ್ತುಸ್ಥಿತಿ ದಾಖಲು- ಎಲ್ಲ ಕಾರಣಗಳಿಂದಲೂ ಈ ಕೃತಿ ಮಹತ್ವಪೂರ್ಣವಾದುದು. ಇಂಥದೊಂದು ಅಪರೂಪದ ಪುಸ್ತಕವನ್ನು ಮೈಸೂರಿನ ‘ಕಾವ್ಯಾಲಯ’ ಪ್ರಕಟಿಸಿದೆ.
*
ಆಗಸ್ಟ್ 24, ಭಾನುವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಂಗಣದಲ್ಲಿ ‘ಕಾವೇರಿ: ಒಂದು ಚಿಮ್ಮು ಒಂದು ಹೊರಳು’ ಕೃತಿ ಬಿಡುಗಡೆಯಾಗಲಿದೆ. ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಪುಸ್ತಕ ಬಿಡುಗಡೆ ಮಾಡುವರು. ವಿಮರ್ಶಕ ಪ್ರೊ.ಎಲ್.ಎಸ್.ಶೇಷಗಿರಿರಾವ್, ವಿಧಾನ ಪರಿಷತ್ ಸಭಾಪತಿ ಬಿ.ಎಲ್.ಶಂಕರ್ ಕಾರ್ಯಕ್ರಮದಲ್ಲಿ ಹಾಜರಿರುವರು.
(ಇನ್ಫೋ ವಾರ್ತೆ)
ಮುಖಪುಟ / ಕಾವೇರಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications