ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿಗಣೇಶ ಹಬ್ಬ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

By Staff
|
Google Oneindia Kannada News

ಗೌರಿಗಣೇಶ ಹಬ್ಬ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌
ಮುಂಗಡ ಟಿಕೇಟು ಕಾದಿರಿಸಿ, ಟೆನ್ಶನ್‌ ನಿವಾರಿಸಿಕೊಳ್ಳಿ !

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ ಗಣೇಶ ಹಬ್ಬದ ಸಲುವಾಗಿ ರಾಜ್ಯದ ಪ್ರಮುಖ ಪಟ್ಟಣಗಳಿಗೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ.

ಮಂಗಳೂರು, ಧರ್ಮಸ್ಥಳ, ಉಡುಪಿ, ಕಾರ್ಕಳ, ಶಿವಮೊಗ್ಗ, ಶಿರಸಿ, ಗೋಕರ್ಣ, ಹೊನ್ನಾವರ, ಕುಮಟಾ, ಕಾರವಾರ, ಮೈಸೂರು, ಹಾಸನ, ದಾವಣಗೆರೆ ಹಾಗೂ ಅಗತ್ಯವೆನಿಸುವ ಇತರ ಕಡೆಗಳಿಗೂ ಹೆಚ್ಚುವರಿ ಬಸ್‌ಗಳು ಓಡಾಡಲಿವೆ. ಆಗಸ್‌ 29 ಹಾಗೂ 30ರಂದು ಈ ವಿಶೇಷ ಬಸ್‌ಗಳು ಪ್ರಯಾಣಿಸಲಿದ್ದು , ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿ ಬಸ್‌ಗಳಿದ್ದಾಗ್ಯೂ ಪ್ರಯಾಣಿಕರು ಆದಷ್ಟು ಬೇಗನೇ ಮುಂಗಡ ಸೀಟು ಕಾದಿರಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 080- 2226323.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X