‘ಮುಸುಕಿನ ಯುದ್ಧ ನಿಲ್ಲುವ ತನಕ ಪಾಕ್ಗೆ ಭೇಟಿ ನೀಡುವುದಿಲ್ಲ ’
‘ಮುಸುಕಿನ ಯುದ್ಧ ನಿಲ್ಲುವ ತನಕ ಪಾಕ್ಗೆ ಭೇಟಿ ನೀಡುವುದಿಲ್ಲ ’
ಗಡಿ ಪ್ರದೇಶದಲ್ಲಿನ ಪಾಕ್ ಕಿತಾಪತಿ ಕುರಿತು ಜಾರ್ಜ್ ಫರ್ನಾಂಡಿಸ್ ಆಕ್ರೋಶ
ಗಡಿ ಪ್ರದೇಶದಲ್ಲಿ ಪ್ರಾಕ್ಸಿ ಯುದ್ಧ ನಡೆಯುತ್ತಿದೆ. ನಾವೀಗ ಗೊಂದಲದ ಪರಿಸ್ಥಿತಿಯಲ್ಲಿದ್ದೇವೆ. ಗಡಿ ಪ್ರದೇಶದಲ್ಲಿ ಭಯೋತ್ಪಾದನೆ ಹಾಗೂ ಯುದ್ಧ ನಿಲ್ಲದ ಹೊರತು ರಕ್ಷಣಾ ಸಚಿವರೊಬ್ಬರು ಪಾಕಿಸ್ತಾನಕ್ಕೆ ಭೇಟಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಆ.26ರ ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್ ಅಭಿಪ್ರಾಯಪಟ್ಟರು.
ಗಡಿ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ನಿಲ್ಲಿಸದೇ ಇದ್ದಲ್ಲಿ ಅದು ಇತರ ಸಮಸ್ಯೆಗಳಿ ಎಡೆ ಮಾಡಿಕೊಡುತ್ತದೆ. ಅದು ಎರಡು ದೇಶ ಅಥವಾ ಖಂಡಗಳಿಗೆ ಸಂಬಂಧಪಡದೇ ಇಡೀ ಜಗತ್ತಿನ ಸಮಸ್ಯೆಯಾಗಿ ಪರಿಣಮಿಸಲಿದೆ ಎಂದ ಜಾರ್ಜ್- ಗಡಿ ಪ್ರದೇಶದಲ್ಲಿ ಒಳ ನುಸುಳುವಿಕೆಯನ್ನು ತಡೆಗಟ್ಟಿದ್ದರೂ , ಅದು ಸಂಪೂರ್ಣವಾಗಿ ನಿಂತಿಲ್ಲ ಎಂದರು.
ಭಾರತ ಹಾಗೂ ಪಾಕಿಸ್ತಾನಗಳೆರಡೂ ಶಾಂತಿಯನ್ನು ಬಯಸುತ್ತವೆ. ಭಾರತ ಹಾಗೂ ಪಾಕ್ನ ಜನತೆ ದೀರ್ಘ ಕಾಲದ ಈ ಸಮಸ್ಯೆಗೆ ಒಂದು ಪರಿಹಾರ ಕಂಡು ಹಿಡಿಯಬೇಕು ಎಂದು ನಿರೀಕ್ಷಿಸುತ್ತದೆ. ಆ ಪರಿಹಾರವನ್ನು ಭಾರತ ಕಂಡು ಹಿಡಿದಿದ್ದರೂ ಪಾಕ್ ಒಪ್ಪಿಕೊಳ್ಳುತ್ತಿಲ್ಲ. ಆದರೂ ಇತ್ತೀಚೆಗೆ ಪಾಕ್ ಅಧ್ಯಕ್ಷ ಪರ್ವೇಜ್ ಮುಷ್ರಫ್, ಭಾರತ- ಪಾಕ್ ನಡುವಿನ ಸಮಸ್ಯೆ ಮಾತುಕತೆಯಿಂದ ಮಾತ್ರ ಪರಿಹಾರವಾಗಬಲ್ಲುದು ಎಂದು ಹೇಳಿರುವುದು ಆಶಾದಾಯಕವಾಗಿದೆ ಎಂದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications