ದಸರಾ ಸ್ಪೆಷಲ್: ಮಹಾರಾಜರ ಜತೆ ಊಟೋಪಚಾರ ಕೂಟ
ದಸರಾ ಸ್ಪೆಷಲ್: ಮಹಾರಾಜರ ಜತೆ ಊಟೋಪಚಾರ ಕೂಟ
ಒಂಬತ್ತು ದಿನಗಳ ಪಂಜಿನ ಮೆರವಣಿಗೆಯಾಂದಿಗೆ ದಸರೆಗೆ ಹೊಸ ಕಳೆ
ಕಳೆದೆರಡು ವರ್ಷಗಳಲ್ಲಿ ದಸರಾಗೆ ಆಗಮಿಸುತ್ತಿರುವ ವಿದೇಶೀ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ಈ ಆಕರ್ಷಣೆಯನ್ನು ದ್ವಿಗುಣಗೊಳಿಸಲು ರಾಜಕುಟುಂಬದ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ ಜೊತೆ ಊಟ- ಕೂಟವನ್ನು ಏರ್ಪಡಿಸಲಾಗಿದೆ.
ಈ ಕುರಿತು ರಾಜಕುಟುಂಬದವರೊಂದಿಗೆ ಸರಕಾರ ಮಾತುಕತೆ ನಡೆಸುತ್ತಿದೆ. ಆಯ್ದ ವಿದೇಶೀ ಪ್ರವಾಸಿಗರಿಗೂ ಈ ಊಟ- ಕೂಟದಲ್ಲಿ ಭಾಗವಹಿಸಿ ಮಹಾರಾಜರೊಂದಿಗೆ ಮಾತುಕತೆ ನಡೆಸುವ ಅವಕಾಶವನ್ನು ಕಲ್ಪಿಸಿಕೊಡಲಾಗುವುದು. ದಸರಾ ಆಚರಣೆ ಸಮಿತಿಯ ನೇತೃತ್ವವನ್ನು ವಹಿಸಿಕೊಂಡಿರುವ ಸಹಕಾರ ಸಚಿವ ಎಚ್. ವಿಶ್ವನಾಥ್ ಈ ವಿಷಯವನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದೇಶಿಯರಿಗೆ ಮಹಾರಾಜರ ಖಾಸಾ ದರಬಾರ್ನ್ನು ವೀಕ್ಷಿಸುವ ಹಾಗೂ ದಸರಾ ಸಂದರ್ಭದಲ್ಲಿ ಅಲಂಕಾರಗೊಳ್ಳುವ ಇಡೀ ಅರಮನೆಯನ್ನು ನೋಡುವ ಅವಕಾಶವನ್ನೂ ಮಾಡಿಕೊಡಲಾಗುವುದು.
ಹಿಂದೆ ಒಂದು ದಿನಕ್ಕೆ ಸೀಮಿತವಾಗಿದ್ದ ಪಂಜಿನ ಮೆರವಣಿಗೆಯನ್ನು ಈ ಬಾರಿ ಒಂಭತ್ತೂ ದಿನಗಳಿಗೆ ವಿಸ್ತರಿಸಲಾಗುವುದು. ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ಈ ಬಾರಿ ದಸರೆಗೆ ವೈಭವದ ಕಳೆ ತಂದುಕೊಡಲು ದಸರಾ ಆಚರಣಾ ಸಮಿತಿ ಶ್ರಮಿಸುತ್ತಿದೆ. ಉತ್ಸವದ ಖರ್ಚಿಗಾಗಿ ಪ್ರಥಮ ಬಾರಿಗೆ ಖಾಸಗಿ ವಲಯದಿಂದಲೂ ಪ್ರಾಯೋಜಕರನ್ನು ಆಹ್ವಾನಿಸಲಾಗಿದೆ. ಸುಮಾರು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಬಾರಿ ದಸರಾ ಉತ್ಸವ ನಡೆಯಲಿದೆ ಎಂದು ವಿಶ್ವನಾಥ್ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications