ಚಿತ್ರದುರ್ಗದ ಕ್ರೀಡಾಂಗಣ ಅವ್ಯವಸ್ಥೆ ಕಂಡು ಮರುಗಿದ ಶಾಸಕ
ಚಿತ್ರದುರ್ಗದ ಕ್ರೀಡಾಂಗಣ ಅವ್ಯವಸ್ಥೆ ಕಂಡು ಮರುಗಿದ ಶಾಸಕ
ಕ್ರೀಡಾಂಗಣವೆಂಬುದು ಅವ್ಯವಸ್ಥೆಗಳ ಆಗರವಯ್ಯಾ.. !
ಉದಾಹರಣೆಗೆ ಚಿತ್ರದುರ್ಗ. ಇತ್ತೀಚೆಗೆ ಹೈಸ್ಕೂಲು ವಿದ್ಯಾರ್ಥಿಗಳಿಗಾಗಿ ಕ್ರೀಡಾಂಗಣ ಉದ್ಘಾಟನೆ ನೆರವೇರಿಸಿದ ಶಾಸಕ ಜಿ. ಎಚ್. ತಿಪ್ಪಾರೆಡ್ಡಿ ಚಿತ್ರದುರ್ಗದ ಕ್ರೀಡಾಂಗಣ ನಿರ್ವಹಣೆಯ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿ ಮಾತನಾಡಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದ ನಿರ್ವಹಣೆ ತೀರಾ ಕಳಪೆಯಾಗಿದೆ. ಲೈಟುಗಳು ಸರಿಯಾಗಿಲ್ಲದ, ಹುಲ್ಲು ಬೆಳೆದಿರುವ ಕ್ರೀಡಾಂಗಣವನ್ನು ನೋಡಿಕೊಳ್ಳುವವರಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕ್ರೀಡಾಂಗಣಕ್ಕೆಂದೇ ಕೋಟಿಗಟ್ಟಲೆ ಹಣ ವ್ಯಯ ಮಾಡುತ್ತಾರೆ. ಆದರೆ ಅವುಗಳಿಗೋಸ್ಕರ ಬಿಡುಗಡೆಯಾದ ಹಣ ಸರಿಯಾದ ರೀತಿಯಲ್ಲಿ ಬಳಕೆಯಾಗದೇ ಇರುವುದರ ಬಗ್ಗೆ ಅವರು ಬೇಜಾರು ಮಾಡಿಕೊಂಡರು.
ಮುಂದಿನ ಒಲಂಪಿಕ್ಸ್ ನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಕ್ರೀಡೆಗೆ ನೀಡುವ ಪ್ರೋತ್ಸಾಹವನ್ನು ಇಮ್ಮಡಿಗೊಳಿಸಿದೆ. ಆದರೆ ಕ್ರೀಡಾ ಕ್ಷೇತ್ರವನ್ನು ನಿರ್ವಹಿಸುವವರು ಪ್ರಾಮಾಣಿಕವಾಗಿ ಹಾಗೂ ಸಮರ್ಪಕವಾಗಿ ಕೆಲಸ ಮಾಡಬೇಕಾಗಿದೆ ಎಂದು ತಿಪ್ಪಾ ರೆಡ್ಡಿ ಹೇಳಿದರು.
ಶಾಸಕರ ಅಸಮಾಧಾನದ ಮಾತುಗಳು ಮುಗಿಯುತ್ತಿದ್ದಂತೆಯೇ ಜಿಲ್ಲಾ ಯುವಜನ ಸೇವಾ ಹಾಗೂ ಕ್ರೀಡಾ ಆಧಿಕಾರಿ ಕೆ. ಬಾಲಾಜಿ ಜಿಲ್ಲಾ ಸ್ಟೇಡಿಯಂನಲ್ಲಿರುವ ಕಚೇರಿಗೆ ತೀರಾ ತಡವಾಗಿ ಆಗಮಿಸಿದರು. ಬಾಲಾಜಿಯವರೊಡನೆ ಮತ್ತೊಮ್ಮೆ ಕ್ರೀಡಾಂಗಣ ನಿರ್ವಹಣೆಯನ್ನು ದೂರಿದ ಶಾಸಕರು ತಮ್ಮ ಮಾತು ಮುಗಿಸಿದರು.
(ಇನ್ಫೋ ವಾರ್ತೆ)
ಪೂರಕ ಓದಿಗೆ-
ಕಾಂಕ್ರೀಟ್ ಕಾಡಿನ ಕ್ರೀಡಾಂಗಣಗಳ ಕಥೆ
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications