ಉತ್ತರ ಕರ್ನಾಟಕಕ್ಕೆಲೇಟ್ ಲತೀಫ್ ಮಳೆ ಬಂತು, ಕೆರೆ ತುಂಬಿತು !
ಉತ್ತರ ಕರ್ನಾಟಕಕ್ಕೆಲೇಟ್ ಲತೀಫ್ ಮಳೆ ಬಂತು, ಕೆರೆ ತುಂಬಿತು !
ರಾಜ್ಯದಲ್ಲಿ ಇನ್ನಷ್ಟು ಮಳೆಯಾಗಲಿದೆ -ಹವಾಮಾನ ಇಲಾಖೆ ಭವಿಷ್ಯ
ಶಿರೂರು ಗ್ರಾಮದ ಬಸಪ್ಪ ಸಹದೇವಪ್ಪ ರೇಡಿನವರ(22), ರೊಟ್ಟಿಗವಾಡದ ನೀಲವ್ವ ಭೀಮಪ್ಪ ಕಿತ್ತೂರ(28), ಮಲ್ಲವ್ವ ಚನ್ನಪ್ಪ ಮೇಗುಂಡಿ(28) ಸಿಡಿಲಿಗೆ ಬಲಿಯಾದವರೆಂದು ಗುರುತಿಸಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಗದಗದಲ್ಲಿ ಭಾರೀ ಮಳೆ ಸುರಿದಿದ್ದು , ಮಂಡರಗಿಯ ತಾಮ್ರದ ಗುಂಡಿ ಕೆರೆಯ ಕಟ್ಟೆ ಒಡೆದು ನೀರು ಹೊರ ಹರಿಯುತ್ತಿದೆ.
ಹುಬ್ಬಳ್ಳಿ ನಗರಕ್ಕೆ ಕುಡಿಯುವ ನೀರು ಪೂರೈಸುತ್ತಿದ್ದ ನೀರಸಾಗರ ಕೆರೆ ಈ ವರ್ಷವಿಡೀ ಒಣಗಿತ್ತು. ಕಳೆದ ದಿನಗಳಲ್ಲಿ ಸುರಿದ ಮಳೆಗೆ ನೀರಸಾಗರ ಕೆರೆಯಲ್ಲಿ ಅಲ್ಪ ಸ್ವಲ್ಪ ನೀರು ಕಾಣಿಸಿಕೊಂಡಿದೆ.
ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಯಥೇಷ್ಟ ಮಳೆ ಸುರಿಯುತ್ತಿದೆ. ಬತ್ತಿಹೋಗಿದ್ದ ತಿಪ್ಪಗೊಂಡನ ಹಳ್ಳಿ ಜಲಾಶಯಕ್ಕೆ ಮತ್ತೆ ನೀರು ಬಂದಿದೆ. ನಗರಕ್ಕೆ ಪ್ರತಿ ದಿನ 120 ದಶಲಕ್ಷ ಕುಡಿಯುವ ನೀರು ಪೂರೈಸುವ ಈ ಕೆರೆ ಈಗ ಮೈದುಂಬಿಕೊಂಡಿದೆ.
ಮುಂಗಾರು ಮುಗಿದು ಈಗ ಹಿಂಗಾರಿನ ಕಾಲ. ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿರುವ ಮಳೆ ಇನ್ನು ಎಂಟ್ಹತ್ತು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅ. 15ರಿಂದ 20 ರ ನಡುವೆ ನೈಋತ್ಯ ಮುಂಗಾರು ಮಾರುತಗಳು ದಕ್ಷಿಣ ಭಾರತದಿಂದ ಸಂಪೂರ್ಣ ಹಿಂತೆಗೆಯಲಿದ್ದು ಈಶಾನ್ಯ ಮಾರುತಗಳು ರಾಜ್ಯವನ್ನು ಪ್ರವೇಶಿಸಲಿವೆ. ವಿಶಾಖ ಪಟ್ಟಣಕ್ಕೆ 150 ಕಿಲೋ ಮೀಟರ್ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದೇ ಈಗ ಬೀಳುತ್ತಿರುವ ದಿಢೀರ್ ಮಳೆಗೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಎ. ಎಲ್. ಕೊಪ್ಪರ್ ತಿಳಿಸಿದ್ದಾರೆ.
ಕೊನೆಯದಾಗಿ: ಮುಂದಿನ 2012ನೇ ವರ್ಷದ ವೇಳೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸಂಗ್ರಹವಾಗುವ ಎಲ್ಲ ನೀರೂ ಬೆಂಗಳೂರು ನಗರದ ಜನತೆಗೆ ಕುಡಿಯುವುದಕ್ಕೆ ಬೇಕಾಗುತ್ತದೆ ಎಂದು ಬೆಂಗಳೂರು ಜಲ ಮಂಡಳಿ ಅಂದಾಜು ಮಾಡಿದೆ.
ಅಂದರೆ ಪ್ರತಿ ವರ್ಷ ಸಾಕಷ್ಟು ಮಳೆ ಸುರಿದು ಕೆಆರ್ಎಸ್ ಭರ್ತಿಯಾದಲ್ಲಿ ಬೆಂಗಳೂರು ಜನತೆಗೆ ಕುಡಿಯುವ ನೀರು ದಕ್ಕುತ್ತದೆ.
ಮುಂದಿನ ವರ್ಷವಾದರೂ ಯಥೇಷ್ಟ ಮಳೆ ಸುರಿಯುತ್ತದೆಯೇ ?
(ಇನ್ಫೋ ವಾರ್ತೆ)
ಇನ್ನಷ್ಟು ಓದು-
ಮೇಘ ಮಲ್ಹಾರ
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications