‘ಮಂದಿರ ನಿರ್ಮಾಣಕ್ಕೆ ಅನುಮತಿ ಕೊಡಿ ಇಲ್ಲವೆ ಕುರ್ಚಿ ಬಿಡಿ’
‘ಮಂದಿರ ನಿರ್ಮಾಣಕ್ಕೆ ಅನುಮತಿ ಕೊಡಿ ಇಲ್ಲವೆ ಕುರ್ಚಿ ಬಿಡಿ’
ಅ. 15ರಿಂದ ಮೂರು ದಿನಗಳ ಕಾಲ ಬೃಹತ್ ಹಿಂದೂ ಪ್ರತಿಭಟನಾ ರ್ಯಾಲಿ
ರಾಮಮಂದಿರ ವಿವಾದ ಕಳೆದ 13 ವರ್ಷಗಳಿಂದ ನಡೆಯುತ್ತಲೇ ಇದೆ. ಆದರೂ ಕೇಂದ್ರ ಸರಕಾರಕ್ಕೆ ವಿವಾದವನ್ನು ಬಗೆಹರಿಸುವುದು ಸಾಧ್ಯವಾಗಿಲ್ಲ. ಕೋರ್ಟ್ ಕೂಡ ಈ ಕುರಿತು ಸುಮ್ಮಾ ಸುಮ್ಮನೆ ವಿಳಂಬ ನೀತಿ ಅನುಸರಿಸುತ್ತಿದೆ. ಆದ್ದರಿಂದ ಅಕ್ಟೋಬರ್ 17ರಂದು ದೇಶಾದ್ಯಂತ ಹಿಂದೂಗಳು ಕೇಂದ್ರ ಸರ್ಕಾರ ಮತ್ತು ಕೋರ್ಟ್ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ವಿರೋಧಿಸಲಿದ್ದಾರೆ ಎಂದು ಕಾಕಡೆ ಸುದ್ದಿಗಾರರಿಗೆ ತಿಳಿಸಿದರು.
ಅಕ್ಟೋಬರ್ 17ರಂದು ನಡೆಸುವ ಪ್ರತಿಭಟನೆಯ ಘೋಷವಾಕ್ಯ ‘ಮಂದಿರ ನಿರ್ಮಾಣಕ್ಕೆ ಅನುಮತಿ ಕೊಡಿ ಇಲ್ಲವಾದರೆ ಅಧಿಕಾರಿ ಬಿಡಿ’. ಪ್ರತಿಭಟನೆಗಾಗಿ ಮೂರು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 15ರಿಂದಲೇ ವಿಹೆಚ್ಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅ. 15ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಈ ರ್ಯಾಲಿಯಲ್ಲಿ 7 ಲಕ್ಷ ಮಂದಿ ಹಿಂದೂಗಳು ಭಾಗವಹಿಸುವರು. ಅ. 16 ಮತ್ತು 17ರಂದು ಲಕ್ನೋ ಮತ್ತು ಗೌಹಾತಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಮಂದಿರ ನಿರ್ಮಾಣದ ಬಗ್ಗೆ ಅಂತಿಮ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ.
ವಿವಾದಿತ ಪ್ರದೇಶವನ್ನು ಹೊರತು ಪಡಿಸಿ ಉಳಿದ ಸ್ಥಳವನ್ನು ವಿಹೆಚ್ಪಿಗೆ ವಹಿಸಿಕೊಡುವಂತೆ 1994ರಲ್ಲಿ ಸುಪ್ರಿಂ ಕೋರ್ಟ್ ಆದೇಶ ನೀಡಿತ್ತು. ಆದರೆ ಆ ಪ್ರದೇಶವನ್ನು ಸರಕಾರ ವಿಹೆಚ್ಪಿಗೆ ನೀಡಿರಲಿಲ್ಲ. ವಿವಾದಿತ ಸ್ಥಳದ ಕುರಿತು ಅಂತಿಮ ನಿರ್ಣಯವಾಗದ ಹೊರತು ಉಳಿದ ನೆಲವನ್ನು ವಿಹೆಚ್ಪಿಗೆ ವಹಿಸಿಕೊಡಲಾಗುವುದಿಲ್ಲ ಎಂದು ಕೇಂದ್ರ ಸರಕಾರ ಇತ್ತೀಚೆಗೆ ಹೇಳುತ್ತಿದೆ. ಅಂದರೆ ಕೇಂದ್ರ ಕೋರ್ಟ್ಗೂ ತಲೆಬಾಗುವುದಿಲ್ಲವೇ ಎಂದು ಪ್ರಶ್ನಿಸಿದ ಕಾಕಡೆ, ಎನ್ಡಿಎ ಬಣಕ್ಕೆ ತಕ್ಕಂತೆ ಬಿಜೆಪಿ ಸರಕಾರ ಕುಣಿಯುತ್ತಿದೆ ಎಂದು ದೂಷಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications