ನೀನಾಸಂ ತಿರುಗಾಟದಲ್ಲಿ ಮೊದಲಗಿತ್ತಿ
ನೀನಾಸಂ ತಿರುಗಾಟದಲ್ಲಿ ಮೊದಲಗಿತ್ತಿ & ಅನಂತಮೂರ್ತಿ ಅವಸ್ಥೆ
ಅಕ್ಟೋಬರ್ 19 ಮತ್ತು 20ರಂದು ಬೆಂಗಳೂರಿನಲ್ಲಿ ನಾಟಕ ಪ್ರದರ್ಶನ
ಅಕ್ಟೋಬರ್ 19ರಂದು ಅವಸ್ಥೆ ಹಾಗೂ ಅ.20ರಂದು ಮೊದಲಗಿತ್ತಿ ನಾಟಕಗಳನ್ನು ನೀನಾಸಂ ಪ್ರದರ್ಶಿಸಲಿದೆ. ಬೆಂಗಳೂರು ಲಲಿತಕಲಾ ಪರಿಷತ್ ಈ ಪ್ರದರ್ಶಗಳನ್ನು ಏರ್ಪಡಿಸಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿಯವರ ಅವಸ್ಥೆ ಕಾದಂಬರಿಯನ್ನು ಪ್ರಕಾಶ್ ಬೆಳವಾಡಿ ಅವರು ನಾಟಕ ರೂಪಕ್ಕೆ ಬದಲಿಸಿದ್ದು , ಬೆಳವಾಡಿಯವರೇ ನಾಟಕವನ್ನು ನಿರ್ದೇಶಿಸಿದ್ದಾರೆ. ವರ್ತಮಾನದ ತಾತ್ವಿಕ ಆಕೃತಿಯಾಂದನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯ ಅವಸ್ಥೆ , ಪ್ರಸಿದ್ಧ ಸಮಾಜವಾದಿ ನೇತಾರ ಶಾಂತವೇರಿ ಗೋಪಾಲಗೌಡರ ಬದುಕು ಸಾಧನೆಗಳನ್ನು ಆಧರಿಸಿ ರಚಿತವಾಗಿದೆ. ಅವಸ್ಥೆ ಅನಂತಮೂರ್ತಿಯವರ ಅತ್ಯುತ್ತಮ ಕೃತಿಗಳಲ್ಲೊಂದು.
ಮೊದಲಗಿತ್ತಿ ನಾಟಕ ಅಸ್ಸಾಮಿ ಕಥೆಯಾಂದನ್ನು ಆಧರಿಸಿದ್ದು. ನಾಟಕರೂಪ ಹಾಗೂ ನಿರ್ದೇಶನ ಬಹರುಲ್ ಇಸ್ಲಾಂ ಅವರದ್ದು . ಗಂಡನಿಂದ ತಿರಸ್ಕೃತಳಾದ ಮುಸ್ಲಿಂ ಹೆಣ್ಣುಮಗಳು ಎದುರಿಸುವ ತಾಕಲಾಟಗಳ ಕಥೆ ಈ ನಾಟಕದ್ದು . ನೀನಾಸಂ ತಿರುಗಾಟದ ಕೃತಿಗಳೆಂದ ಮೇಲೆ ನಾಟಕಪ್ರಿಯರಿಗೆ ಹಬ್ಬವಿದ್ದಂತೆ. ಈ ಬಾರಿ ತಪ್ಪಿದರೆ, ಮತ್ತೆ ವರ್ಷ ಕಾಯಬೇಕು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications