ಬೆಂಗಳೂರಿನ ಡೆಂಗೆ ಗಾಯಕ್ಕೆ ಕಾಲರಾ ಬರೆ : ಇಬ್ಬರು ಬಲಿ
ಬೆಂಗಳೂರಿನ ಡೆಂಗೆ ಗಾಯಕ್ಕೆ ಕಾಲರಾ ಬರೆ : ಇಬ್ಬರು ಬಲಿ
ಆಸ್ಪತ್ರೆಗೆ ಸೇರಿ ಕಾಲರಾ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 26
ನಗರದ ಕೆ.ಸಿ.ಜನರಲ್, ಐಸೋಲೇಷನ್ ಮೊದಲಾದ ಸರ್ಕಾರಿ ಆಸ್ಪತ್ರೆಗಳ ಕಡತಗಳ ಪ್ರಕಾರ ಈವರೆಗೆ ಸುಮಾರು 26 ಮಂದಿಗೆ ಕಾಲರಾ ರೋಗದ ಲಕ್ಷಣಗಳು ಕಾಣಿಸಿವೆ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಮರ್ಪಕವಾಗಿ ನೀರು ಹರಿದು ಹೋಗದ ಜಾಗೆಗಳಲ್ಲಿ ರೋಗಾಣುಗಳು ಹುಟ್ಟಿಕೊಂಡಿವೆ. ಜೊತೆಗೆ ಮಳೆ ಹನಿಗಳಿಂದ ಮೇಲೇಳುವ ರೋಗಾಣುಗಳು ರಸ್ತೆ ಬದಿಯಲ್ಲಿ ಮಾರುವ ತಿನಿಸುಗಳ ಮೇಲೆ ಕೂರುತ್ತವೆ. ಇದನ್ನು ತಿಂದವರು ಕೂಡ ರೋಗಕ್ಕೆ ತುತ್ತಾಗುವ ಅಪಾಯವಿದೆ ಎನ್ನುತ್ತಾರೆ ವೈದ್ಯರು.
ವೈಯಾಲಿಕಾವಲ್ನ ಮೋಹನ್ (26) ಹಾಗೂ ಸುಲೋಚನ (42) ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕಾಲರಾ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಇಬ್ಬರೂ ಮೃತಪಟ್ಟಿದ್ದಾರೆ. ಆ್ಯಂಬ್ಯುಲೆನ್ಸ್ನಲ್ಲಿ ವೈಯಾಲಿ ಕಾವಲ್ಗೆ ತೆರಳಿದ ವೈದ್ಯರ ತಂಡ, ಅಲ್ಲಿನ ಜನರಿಗೆ ನೀರನ್ನು ಕುದಿಸಿ ಕುಡಿಯುವಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಮಹಾಪೌರ ಸಿ.ಎಂ.ನಾಗರಾಜ್ ನಗರದ ಜನ ನೈರ್ಮಲ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಯಾವುದೇ ಜ್ವರ ಕಾಣಿಸಿಕೊಂಡರೂ ತಕ್ಷಣವೇ ವೈದ್ಯಾಧಿಕಾರಿಗಳನ್ನು ಕಾಣಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲರಾ ಮತ್ತು ಡೆಂಗೆ ರೋಗ ನಿವಾರಣೆಗೆ ಅಗತ್ಯವಿರುವ ಔಷಧಿಗಳನ್ನು ಸಮರ್ಪಕ ರೀತಿಯಲ್ಲಿ ಪೂರೈಸುವಂತೆ ಮೇಯರ್ ಆದೇಶಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications