ಬುದ್ಧಂ ಶರಣಂ ಗಚ್ಛಾಮಿ: ನೂರಾರು ದಲಿತರು ಬೌದ್ಧ ಧಮ್ಮಕ್ಕೆ
ಬುದ್ಧಂ ಶರಣಂ ಗಚ್ಛಾಮಿ: ನೂರಾರು ದಲಿತರು ಬೌದ್ಧ ಧಮ್ಮಕ್ಕೆ
1956ರಲ್ಲಿ ಇದೇ ದಿನ ಅಂಬೇಡ್ಕರ್ ಬೌದ್ಧ ಧಮ್ಮೀಯರಾಗಿದ್ದರು
ಬೌದ್ಧ ‘ಧಮ್ಮ’ಕ್ಕೆ ಮತಾಂತರ ಹೊಂದಲು ಬಾಬಾಸಾಹೇಬ್ ಅಂಬೇಡ್ಕರ್ 1956ರಲ್ಲಿ ಸಿದ್ಧಪಡಿಸಿದ್ದ 22 ಅಂಶಗಳ ಪ್ರತಿಜ್ಞಾ ವಿಧಿಯನ್ನು ನೂರಾರು ದಲಿತರು ಮಂಗಳವಾರ ಪುನರುಚ್ಚರಿಸಿದರು. ಬೌದ್ಧ ಧಮ್ಮ ದೀಕ್ಷಾ ಸಮಿತಿ ಮತಾಂತರ ಸಮಾರಂಭವನ್ನು ಆಯೋಜಿಸಿತ್ತು. ಅಂತರರಾಷ್ಟ್ರೀಯ ಬೌದ್ಧ ಯುವ ಸಂಸ್ಥೆಗಳು ಹಾಗೂ ದಲಿತ ಸಂಘಟನೆಗಳು ಸಮಾರಂಭವನ್ನು ಬೆಂಬಲಿಸಿದ್ದವು.
ಹಿಂದೂ ಧರ್ಮವನ್ನು ನಾವು ತೊರೆಯುತ್ತೇವೆ. ಏಕೈಕ ನಿಜ ಧರ್ಮವಾದ ಬೌದ್ಧ ಧಮ್ಮವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮತಾಂತರವಾದವರು ಘಂಟಾಘೋಷವಾಗಿ ಪ್ರತಿಜ್ಞೆ ಮಾಡಿದರು. ಸಂಘಟಕರು 50 ಸಾವಿರ ದಲಿತರನ್ನು ಮತಾಂತರಗೊಳಿಸುವ ಗುರಿ ಇಟ್ಟುಕೊಂಡಿದ್ದರು. ಆದರೆ ಈ ಗುರಿ ತೀರಾ ದೂರವಾಯಿತು. ಕೇವಲ ನೂರಾರು ದಲಿತರು ಮಾತ್ರ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
1956ರ ಅಕ್ಟೋಬರ್ 14ನೇ ತಾರೀಕು ಅಂಬೇಡ್ಕರ್ ಬೌದ್ಧ ಧಮ್ಮಕ್ಕೆ ಮತಾಂತರ ಹೊಂದಿದ್ದರು. ಆ ದಿನದ ಸ್ಮರಣಾರ್ಥ ಮಂಗಳವಾರ ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದೂ ಧರ್ಮದ ಬಹು ಜಾತಿ ಪದ್ಧತಿಯಿಂದ ದಲಿತರು ನಿಕೃಷ್ಟರಾಗಿದ್ದಾರೆ. ಸಮಾಜದಲ್ಲಿ ಅವರಿಗೆ ಸಿಗಬೇಕಾದ ಸ್ಥಾನಮಾನ ಸಿಗುತ್ತಿಲ್ಲ. ಬೌದ್ಧ ಧರ್ಮಕ್ಕೆ ಸೇರುವುದರಿಂದ ಅವರ ಮನಸ್ಸಲ್ಲಿ ಜಾತೀಯತೆಯ ಕೊಂಕು ಅಳಿಸಿ ಹೋಗುತ್ತದೆ ಎಂದು ಕಾರ್ಯಕ್ರಮದ ಸಂಘಟಕರು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications