ಆರೋಗ್ಯ ನಗರಿಯಾಗಿ ಬೆಂಗಳೂರು, ಬಹರೈನ್ ಜೊತೆ ಒಪ್ಪಂದ
ಆರೋಗ್ಯ ನಗರಿಯಾಗಿ ಬೆಂಗಳೂರು, ಬಹರೈನ್ ಜೊತೆ ಒಪ್ಪಂದ
ರಾಜ್ಯದಲ್ಲಿನ ಆರೋಗ್ಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ಚಿಂತನೆ
ಬೆಂಗಳೂರಿನಲ್ಲಿ ಅತ್ಯುತ್ತಮ ವೈದ್ಯಕೀಯ ಸೇವೆಗಳು ಲಭ್ಯವಿದ್ದು , ಈ ಸೇವೆಗಳನ್ನು ಅಂತರರಾಷ್ಟ್ರೀಯ ಸಮುದಾಯಕ್ಕೆ ತಲುಪಿಸುವ ಮೂಲಕ ರಾಜಧಾನಿಯನ್ನು ವೈದ್ಯಕೀಯ ನಗರಿಯನ್ನಾಗಿಯೂ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಕಾರಣದಿಂದಾಗಿ ಬಹರೈನ್ನ ರೋಗಿಗಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಅನುವಾಗುವಂತೆ, ಶೀಘ್ರದಲ್ಲೇ ಬರಹೈನ್ ಆಡಳಿತದೊಂದಿಗೆ ಒಪ್ಪಂದವೊಂದಕ್ಕೆ ಬರಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಐಟಿ ಸಚಿವ ಡಿ.ಬಿ.ಇನಾಂದಾರ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಅತ್ಯುತ್ತಮ ವೈದ್ಯಕೀಯ ಪ್ರತಿಭೆ ಹಾಗೂ ಸೇವೆಗಳು ಬೆಂಗಳೂರಿನಲ್ಲಿ ಲಭ್ಯವಿವೆ. ಈ ಅನುಕೂಲಗಳನ್ನು ನಾವು ಅಂತರರಾಷ್ಟ್ರೀಯ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳಬೇಕಿದೆ. ಕೆಲವೊಂದು ಸಂದರ್ಭಗಳಲ್ಲಿ ಇತರ ವೈದ್ಯಕೀಯ ಕೇಂದ್ರಗಳಿಗಿಂತ ಬೆಂಗಳೂರಿನಲ್ಲಿ ಶೇ.50ರಷ್ಟು ಕಡಿಮೆ ಶುಲ್ಕಕ್ಕೆ ವೈದ್ಯಕೀಯ ಸೇವೆಗಳು ದೊರೆಯುತ್ತವೆ ಎಂದು ಇನಾಂದಾರ್ ಹೇಳಿದರು.
ಸುಮಾರು 6 ಲಕ್ಷ ಜನಸಂಖ್ಯೆಯನ್ನು ಬಹರೈನ್ ಹೊಂದಿದ್ದು , ಇದರಲ್ಲಿ 1.2 ಲಕ್ಷ ಮಂದಿ ಭಾರತೀಯ ಮೂಲದವರು ಎಂದ ಇನಾಂದಾರ್- ರಾಜ್ಯವನ್ನು ವೃದ್ಧರ ಮನೆಯನ್ನಾಗಿ ರೂಪಿಸುವ ರಾಜ್ಯ ಸರ್ಕಾರದ ಇರಾದೆಯನ್ನು ಬಹಿರಂಗಪಡಿಸಿದರು. ಖಾಸಗಿ ಸಹಭಾಗಿತ್ವದಲ್ಲಿ ವೃದ್ಧಾಶ್ರಮಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ವೃದ್ಧಾಶ್ರಮಗಳು ಆಸ್ಪತ್ರೆಗಳಿಗೆ ಹೊಂದಿಕೊಂಡಿರುವಂತೆ ನೋಡಿಕೊಳ್ಳಲಾಗುವುದು ಎಂದರು.
ವಿವಿಧ ಸಂಸ್ಥೆಗಳನ್ನು ಬೆಂಗಳೂರಿನಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಕೋರಲಾಗುತ್ತಿದೆ. ಬೆಂಗಳೂರಿನಲ್ಲಿನ ತನ್ನ ನಾಗರಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಬ್ರಿಟನ್ನ ರಾಷ್ಟ್ರೀಯ ಆರೋಗ್ಯ ಸೇವೆಗಳು (ಎನ್ಎಚ್ಎಸ್) ಕೇಂದ್ರವನ್ನು ಸಂಪರ್ಕಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ರಾಜ್ಯ ಪ್ರವಾಸೋದ್ಯಮ ಆಯುಕ್ತ ಮಹೇಂದ್ರ ಜೈನ್ ತಿಳಿಸಿದರು.
ರಾಜ್ಯದಲ್ಲಿ ಆಲೋಪತಿ ಮಾತ್ರವಲ್ಲದೆ, ಆಯುರ್ವೇದ, ನ್ಯಾಚುರೋಪತಿ, ಯೋಗ ಹಾಗೂ ಹೋಮಿಯೋಪತಿ ಚಿಕಿತ್ಸಾ ಸೇವೆಗಳು ಲಭ್ಯವಿರುವುದು ಆರೋಗ್ಯ ಪ್ರವಾಸೋದ್ಯಮ ದೃಷ್ಟಿಯಿಂದ ಲಾಭಕರ ಎಂದು ಜೈನ್ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications