ಷರೀಫ್ ಮಾತು ಸರಿಯೆಂದ ಪೂಜಾರಿ ; ಕೃಷ್ಣ ನಾಯಕತ್ವಕ್ಕೆ ಹಿನ್ನಡೆ
ಷರೀಫ್ ಮಾತು ಸರಿಯೆಂದ ಪೂಜಾರಿ ; ಕೃಷ್ಣ ನಾಯಕತ್ವಕ್ಕೆ ಹಿನ್ನಡೆ
ಧರ್ಮಸಿಂಗ್ರದು ಭಾವೋದ್ವೇಗದ ಮಾತು, ನಾಯಕತ್ವದ ನಿರ್ಧಾರ ಹೈಕಮಾಂಡ್ಗೆ ಸೇರಿದ್ದು ...
ಕಾಂಗ್ರೆಸ್ ಪಕ್ಷ ಏಕೈಕ ನಾಯಕರನ್ನು ಹೊಂದಿದೆ. ಅದು ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ. ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷವನ್ನು ಯಾರು ಮುನ್ನಡೆಸಬೇಕು ಎನ್ನುವುದನ್ನು ಸೋನಿಯಾ ಅವರೇ ನಿರ್ಧರಿಸುತ್ತಾರೆ ಎಂದು ಜನಾರ್ದನ ಪೂಜಾರಿ ಮಂಗಳವಾರ ಸುದ್ದಿಗಾರಿಗೆ ತಿಳಿಸಿದರು.
ವಿಧಾನಸಭೆ ಚುನಾವಣೆಗಳನ್ನು ಮುಖ್ಯಮಂತ್ರಿ ಕೃಷ್ಣ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಎದುರಿಸುತ್ತದೆ ಎನ್ನುವ ಧರ್ಮಸಿಂಗ್ ಅವರ ಹೇಳಿಕೆಯನ್ನು ಸಂಸದ ಸಿ.ಕೆ.ಜಾಫರ್ ಷರೀಫ್ ತೀವ್ರವಾಗಿ ಟೀಕಿಸಿದ್ದರು. ಪಕ್ಷದ ನಾಯಕತ್ವವನ್ನು ಹೈ ಕಮಾಂಡ್ ನಿರ್ಧರಿಸುತ್ತದೆ ಎಂದು ಸೋಮವಾರ ಕಾರ್ಯಕ್ರಮವೊಂದರಲ್ಲಿ ಷರೀಫ್ ಹೇಳಿದ್ದರು. ಷರೀಫ್ ಅವರ ಹೇಳಿಕೆಯನ್ನು ಸಮರ್ಥಿಸಿದ ಜನಾರ್ದನ ಪೂಜಾರಿ, ಧರ್ಮಸಿಂಗ್ ಅವರ ಹೇಳಿಕೆಯನ್ನು ವೈಯಕ್ತಿಕ ಅಭಿಪ್ರಾಯ ಎಂದು ಬಣ್ಣಿಸಿದರು.
ಬಿಜಾಪುರದಲ್ಲಿನ ಜನ ಸ್ಪಂದನ ಕಾರ್ಯಕ್ರಮದಲ್ಲಿ ಕೃಷ್ಣ ಅವರ ನಾಯಕತ್ವದ ಕುರಿತು ಹೊರಬಿದ್ದ ಧರ್ಮಸಿಂಗ್ರ ಹೇಳಿಕೆ, ಹಾಗೂ ಆ ಹೇಳಿಕೆಗೆ ಕೃಷ್ಣ ಅವರ ಸಮ್ಮತಿಯ ಮಾತು ಭಾವೋದ್ವೇಗದಲ್ಲಿ ಹೊರಬಿದ್ದ ಹೇಳಿಕೆಗಳು. ಕಾಂಗ್ರೆಸ್ ಪಕ್ಷ ತನ್ನ ಕಾರ್ಯಕರ್ತರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತದೆ. ಕೃಷ್ಣ ಅವರ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಗಳನ್ನು ಎದುರಿಸುತ್ತದೆ ಎಂದು ಪೂಜಾರಿ ಹೇಳಿದರು.
ಜಾಫರ್ ಷರೀಫ್ ಅವರನ್ನು ಶೀಘ್ರವೇ ಭೇಟಿ ಮಾಡಿ ಪಕ್ಷದ ವಿಷಯಗಳ ಕುರಿತು ಚರ್ಚಿಸುತ್ತೇನೆ ಎಂದ ಪೂಜಾರಿ, ಪಕ್ಷದಲ್ಲಿ ಯಾವುದೇ ಭಿನ್ನಮತ ಚಟುವಟಿಕೆ ನಡೆಯುತ್ತಿರುವುದನ್ನು ಸ್ಪಷ್ಟವಾಗಿ ತಳ್ಳಿಹಾಕಿದರು.
ಆನ್ಲೈನ್ ಲಾಟರಿಯನ್ನು ರದ್ದುಪಡಿಸಲು ಕೃಷ್ಣ ಅವರು ಚಿಂತಿಸುತ್ತಿರುವುದು ಸ್ವಾಗತಾರ್ಹ. ಆನ್ಲೈನ್ ಲಾಟರಿಗೆ ತಮ್ಮ ವಿರೋಧವೂ ಇದೆ ಎಂದು ಜನಾರ್ದನ ಪೂಜಾರಿ ತಿಳಿಸಿದರು. ತಾವು ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಯಲ್ಲ ಎಂದು ಸುದ್ದಿಗಾರರ ಪ್ರಶ್ನೆಯಾಂದಕ್ಕೆ ಪೂಜಾರಿ ಉತ್ತರಿಸಿದರು.
(ಪಿಟಿಐ)
ವಾರ್ತಾ ಸಂಚಯ
ಎಸ್ಸೆಂ ಕೃಷ್ಣ ಮತ್ತು ಸಚಿವರ ವಿರುದ್ಧ ಜಾಫರ್ ಷರೀಫ್ ಮಾತುಕತ್ತಿ
ಮುಖಪುಟ / ಕೃಷ್ಣಗಾರುಡಿ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications