ಆರ್ಟ್ ಆಫ್ ಲಿವಿಂಗ್ ರವಿಶಂಕರ್ರಿಂದ ‘ಸಂಚಾರ ಕೃಷಿ ಸಂಸ್ಥೆ’
ಆರ್ಟ್ ಆಫ್ ಲಿವಿಂಗ್ ರವಿಶಂಕರ್ರಿಂದ ‘ಸಂಚಾರ ಕೃಷಿ ಸಂಸ್ಥೆ’
ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ರವಿಶಂಕರ್ ಕಾರ್ಯಕ್ರಮ
ದಿನನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿಗಳು ತಮ್ಮ ಮನಸ್ಸಿಗೆ ನೋವುಂಟು ಮಾಡುತ್ತಿವೆ. ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸದಲ್ಲಿ ಪ್ರತಿಯಾಬ್ಬರೂ ಭಾಗಿಯಾಗಬೇಕು ಎಂದು ರವಿಶಂಕರ್ ಹೇಳಿದರು. ‘ಶ್ರೀ ಶ್ರೀ ಸಂಚಾರ ಕೃಷಿ ಸಂಸ್ಥೆ’ಗೆ ಸೋಮವಾರ (ಅ.13) ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
ಆಡಳಿತ ಹಾಗೂ ಗ್ರಾಮೀಣ ರೈತರ ನಡುವೆ ದೊಡ್ಡ ಕಂದರ ಉಂಟಾಗಿದೆ. ಈ ಕಂದರವನ್ನು ನಿವಾರಿಸಿ ರೈತರ ನಿಜವಾದ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸಬೇಕಾಗಿದೆ ಎಂದು ರವಿಶಂಕರ್ ಅಭಿಪ್ರಾಯಪಟ್ಟರು.
ನಮ್ಮ ಸಂಸ್ಥೆಯ ಕಾರ್ಯಕರ್ತರು 15 ಸಾವಿರ ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದು , ಸಾವಿರಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಒಂದು ಸಾವಿರ ಮನೆಗಳನ್ನು ಹಳ್ಳಿಗಳಲ್ಲಿ ಕಟ್ಟಿಕೊಟ್ಟಿದ್ದಾರೆ ಎಂದು ರವಿಶಂಕರ್ ತಿಳಿಸಿದರು. ತ್ರಿಪುರಾದಲ್ಲಿನ ರೈತರು ಬೆಳೆಯುವ ವಿಶ್ವದ ಅತ್ಯುತ್ತಮ ಅನಾನಸ್ಗಳಿಗೆ ನಮ್ಮಲ್ಲಿ ಮಾರುಕಟ್ಟೆಯಿಲ್ಲ , ಆದರೆ ವಿದೇಶಗಳಿಂದ ಹಣ್ಣುಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ, ಇದೊಂದು ವಿಪರ್ಯಾಸ ಎಂದು ರವಿಶಂಕರ್ ವಿಷಾದಿಸಿದರು.
ರೈತರ ಆತ್ಮಹತ್ಯೆಗೆ ಜಾಗತೀಕರಣವೇ ಕಾರಣ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ರೈತಸಂಘದ ಅಧ್ಯಕ್ಷ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು. ಹೆಚ್ಚುವರಿ ಕೃಷಿ ನಿರ್ದೇಶಕ ಎಸ್.ಸಿ.ವಿ.ರೆಡ್ಡಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications