ಅ.ನ.ಕೃ ‘ಸಂಧ್ಯಾರಾಗ’ ಮರು ಮುದ್ರಣ
ಅ.ನ.ಕೃ ‘ಸಂಧ್ಯಾರಾಗ’ ಮರು ಮುದ್ರಣ
ಅ.19ರ ಭಾನುವಾರ 28ನೇ ಮುದ್ರಣ ಭಾಗ್ಯ ಕಾಣುತ್ತಿರುವ ‘ಸಂಧ್ಯಾರಾಗ’ ಬಿಡುಗಡೆ.
ಅ.ನ.ಕೃ ಅವರ ‘ಸಂಧ್ಯಾರಾಗ’ 28ನೇ ಬಾರಿ ಮರುಮುದ್ರಣ ಕಾಣುತ್ತಿದ್ದು , 28 ಬಾರಿ ಮುದ್ರಿತವಾಗಿರುವ ಕನ್ನಡದ ಅಪರೂಪದ ಕೃತಿಗಳಲ್ಲಿ ಸಂಧ್ಯಾರಾಗ ಒಂದಾಗಿದೆ.
ನೂರಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಿರುವ ಅ.ನ.ಕೃ ಕನ್ನಡಿಗರಿಗೆ ಓದುವ ಹುಚ್ಚು ಹಿಡಿಸಿದವರು. ಒಂದೆಡೆ ಕನ್ನಡ ಜಾಗೃತಿ ಮೂಡಿಸಲು ನಾಡಿನಾದ್ಯಂತ ಮಿಂಚಿನಂತೆ ಸಂಚರಿಸುತ್ತಾ , ತಮ್ಮ ವಾಗ್ಝರಿಯಿಂದ ಕೇಳುಗರನ್ನು ಮಂತ್ರಮುಗ್ಧರಾಗಿಸುತ್ತಿದ್ದ ಅ.ನ.ಕೃ, ಇನ್ನೊಂದೆಡೆ ತಮ್ಮ ಕಾದಂಬರಿಗಳ ಮೂಲಕ ಓದುಗ ವಲಯವನ್ನು ವಿಸ್ತರಿಸುತ್ತಿದ್ದರು.
ಪ್ರಗತಿಶೀಲ ಪಂಥದ ಮುಂಚೂಣಿಯಲ್ಲಿದ್ದ ಅ.ನ.ಕೃ ಅವರ ಶ್ರೇಷ್ಠ ಕೃತಿ ಎನ್ನುವ ಅಗ್ಗಳಿಕೆಗೆ ‘ಸಂಧ್ಯಾರಾಗ’ ಪಾತ್ರವಾಗಿದೆ. ಸಂಗೀತಗಾರನ ಜೀವನದ ಏರಿಳಿತಗಳನ್ನು ದಾಖಲಿಸುವ ‘ಸಂಧ್ಯಾರಾಗ’ ಕನ್ನಡ ಸಾಹಿತ್ಯದಲ್ಲಿನ ಜನಪ್ರಿಯ ಕಾದಂಬರಿಗಳಲ್ಲೊಂದು. ‘ಸಂಧ್ಯಾರಾಗ’ ಸಿನಿಮಾ ಆಗಿಯೂ ಯಶಸ್ವಿಯಾಗಿದೆ. ಸಂಗೀತಗಾರ ಲಕ್ಷ್ಮಣನ ಪಾತ್ರದಲ್ಲಿ ವರನಟ ರಾಜ್ಕುಮಾರ್ ಅವಿಸ್ಮರಣೀಯ ಅಭಿನಯ ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ. ಕೆ. ಚಂದ್ರಶೇಖರ್ ಅವರು ‘ಸಂಧ್ಯಾರಾಗ’ ಪುಸ್ತಕ ಬಿಡುಗಡೆ ಮಾಡುವರು. ಅನಕೃ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹಾರನಹಳ್ಳಿ ರಾಮಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಜಯ ಕರ್ನಾಟಕ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ವಿಶ್ವೇಶ್ವರ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಮಾರಂಭ ನಡೆಯುವ ಸ್ಥಳ : ಬಸವನಗುಡಿ ನ್ಯಾಷನಲ್ ಕಾಲೇಜಿನ ಡಾ. ಎಚ್. ಎನ್. ಸಭಾಂಗಣ
ದಿನಾಂಕ : ಅಕ್ಟೋಬರ್ 19ರ ಭಾನುವಾರ
ಸಮಯ : ಬೆಳಿಗ್ಗೆ 10.30
ಅ.ನ.ಕೃಷ್ಣರಾಯರನ್ನು ನೆನಪಿಸಿಕೊಳ್ಳಲು ಒಂದು ಕಾರಣವಾಗುವ ಈ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತ.
ಅ.ನ.ಕೃ. ಹಾಗೂ ಅವರ ಕೃತಿಗಳ ಬಗೆಗಿನ ವಿವರಗಳಿಗೆ ನೋಡಿ-
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications