ಇನ್ನು ಮುಂದೆ ಸರ್ಕಾರಿ ಕಚೇರಿ ಫೈಲುಗಳು ಧೂಳು ಹಿಡಿಯುವುದಿಲ್ಲ !
ಇನ್ನು ಮುಂದೆ ಸರ್ಕಾರಿ ಕಚೇರಿ ಫೈಲುಗಳು ಧೂಳು ಹಿಡಿಯುವುದಿಲ್ಲ !
ನವೆಂಬರ್ ತಿಂಗಳಿಂದ 63 ಲಕ್ಷ ಕಡು ಬಡವರಿಗೆ ಪಡಿತರ ಧಾನ್ಯ ಪೂರೈಕೆ
ಸುದ್ದಿಗಾರರ ಜೊತೆ ಗುರುವಾರ (ಅ. 16) ಮಾತಾಡುತ್ತಿದ್ದ ವಾರ್ತಾ ಸಚಿವ ಅಲ್ಲಂ ವೀರಭದ್ರಪ್ಪ ಸಚಿವ ಸಂಪುಟದಲ್ಲಿ ಕೈಗೊಂಡ ಈ ನಿರ್ಣಯವನ್ನು ತಿಳಿಸಿದರು. ಈ ವರ್ಷ ಜನವರಿಯಲ್ಲಿ ವಿಲೇವಾರಿಯಾಗದ ಒಂದು ವರ್ಷಕ್ಕೂ ಹೆಚ್ಚು ಹಳೆಯ 1.85 ಲಕ್ಷ ಕಡತಗಳು ವಿವಿಧ ಸರ್ಕಾರಿ ಇಲಾಖೆಗಳ ಮೇಜುಗಳ ಮೇಲೆ ಉಳಿದಿದ್ದವು. ಕಳೆದ ಆರೆಂಟು ತಿಂಗಳ ಅವಧಿಯಲ್ಲಿ ಸಾಕಷ್ಟು ಚುರುಕಾಗಿ ಕೆಲಸ ಮಾಡುವ ಮೂಲಕ ಈಗ ಕಡತಗಳ ಸಂಖ್ಯೆಯನ್ನು 55 ಸಾವಿರಕ್ಕೆ ಇಳಿಸಲಾಗಿದೆ. ಈ ವರ್ಷಾಂತ್ಯಕ್ಕೆ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಲು ಕೆಲಸ ನಿರತರಾಗುವಂತೆ ಅಧಿಕಾರಿಗಳಿಗೆ ಆದೇಶಿಸಲಾಗುವುದು. ಕನಿಷ್ಠ ಪಕ್ಷ ಕಡತಗಳ ಸಂಖ್ಯೆಯನ್ನು 10 ಸಾವಿರಕ್ಕಾದರೂ ಇಳಿಸುವುದು ಸರ್ಕಾರದ ಗುರಿ. ಇನ್ನು ಮುಂದೆ ಎಂತಹ ಕಡತವಾದರೂ 6 ತಿಂಗಳೊಳಗಾಗಿ ವಿಲೇವಾರಿ ಮಾಡಲಾಗುವುದು ಎಂದು ಅಲ್ಲಂ ಹೇಳಿದರು.
63 ಲಕ್ಷ ಕುಟುಂಬಗಳಿಗೆ ಹಳದಿ ಪಡಿತರ ಚೀಟಿ : ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಿಂಗಳಿಗೆ 28 ಕಿಲೋ ಅಕ್ಕಿ (ಪ್ರತಿ ಕಿಲೋಗೆ 6.15 ರುಪಾಯಿ ದರದಲ್ಲಿ) ಹಾಗೂ 7 ಕಿಲೋ ಗೋಧಿ (ಕಿಲೋಗೆ 4.65ರು. ದರದಲ್ಲಿ) ಕೊಡಲು 63 ಲಕ್ಷ ಹಳದಿ ಪಡಿತರ ಚೀಟಿಯನ್ನು ವಿತರಿಸಲಾಗುವುದು. ಆ ಮೂಲಕ ನವೆಂಬರ್ 1ರಿಂದ ಕಡು ಬಡವರ ಕುಟುಂಬಗಳಿಗೆ ಧಾನ್ಯ ಪೂರೈಸಬೇಕೆಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಅಲ್ಲಂ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications