ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚನ್ನಪಟ್ಟಣ ಬಳಿ ಅಪಘಾತ: ಸುತ್ತೂರು ಶ್ರೀಗಳಿಗೆ ಸಣ್ಣಪುಟ್ಟ ಗಾಯ

By Staff
|
Google Oneindia Kannada News

ಚನ್ನಪಟ್ಟಣ ಬಳಿ ಅಪಘಾತ: ಸುತ್ತೂರು ಶ್ರೀಗಳಿಗೆ ಸಣ್ಣಪುಟ್ಟ ಗಾಯ
ಸರಣಿ ಅಪಘಾತದಲ್ಲಿ ಅಪಾಯದಿಂದ ಪಾರಾದ ದೇಶಿಕೇಂದ್ರ ಸ್ವಾಮೀಜಿ

ಚನ್ನಪಟ್ಟಣ : ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಕಾರು ಅಪಘಾತಕ್ಕೆ ತುತ್ತಾಗಿದ್ದು , ಸಣ್ಣಪುಟ್ಟ ಗಾಯಗಳೊಂದಿಗೆ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪೈಲಟ್‌ ಕಾರು ಅಚಾನಕ್ಕಾಗಿ ಬ್ರೇಕ್‌ ಹಾಕಿದಾಗ, ಹಿಂದೆ ಬರುತ್ತಿದ್ದ ಶ್ರೀಗಳ ಕಾರು ಪೈಲಟ್‌ ಕಾರ್‌ಗೆ ಗುದ್ದಿ ಅಪಘಾತ ಸಂಭವಿಸಿದೆ. ಹಿಂದಿದ್ದ ಬೆಂಗಾವಲು ಕಾರು ಶ್ರೀಗಳ ಕಾರಿಗೆ ಹಿಂದಿನಿಂದ ಗುದ್ದಿ ಇನ್ನಷ್ಟು ಅನಾಹುತವಾಗಿದೆ. ಗುರುವಾರ (ಅ.16) ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು , ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಗಳು ಆರೋಗ್ಯದಿಂದ ಇದ್ದಾರೆ. ಅಪಘಾತದ ನಂತರವೂ ಅವರು ಬದಲಿ ವಾಹನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X