ದೀವಳಿಗೆ ಕೊಡುಗೆ; ಓದುಗರಿಗೆ ಕಾದಂಬರಿ ಅ.ನ.ಕೃ.‘ಸಂಧ್ಯಾರಾಗ’
ದೀವಳಿಗೆ ಕೊಡುಗೆ; ಓದುಗರಿಗೆ ಕಾದಂಬರಿ ಅ.ನ.ಕೃ.‘ಸಂಧ್ಯಾರಾಗ’
ಲೇಖನ ಹಾಗೂ ವಿಮರ್ಶಾ ಬರಹಗಳನ್ನೊಳಗೊಂಡ ಬೃಹತ್ ಸಂಪುಟ
ಕನ್ನಡಿಗರಲ್ಲಿ ಓದುವ ಅಭಿರುಚಿಯನ್ನು ಮೂಡಿಸಲು ಶ್ರಮಿಸಿದ ಅ.ನ.ಕೃ. ಅವರ ಕೃತಿಗಳನ್ನು ಮರು ಪರಿಶೀಲಿಸಬೇಕಾದ ಅಗತ್ಯವಿದೆ. ಅವರ ಆಳವಾದ ಹಾಗೂ ಗಂಭೀರವಾದ ಚಿಂತನೆಗಳ ಕುರಿತ ಸಂಶೋಧನೆ ಪಿಎಚ್.ಡಿ ಪ್ರಬಂಧಕ್ಕೆ ಯೋಗ್ಯವಾದುದು ಎಂದು ಕೃಷ್ಣಯ್ಯ ಅಭಿಪ್ರಾಯಪಟ್ಟರು. ಅ.ನ.ಕೃ ಅವರ ಮೇರು ಕಾದಂಬರಿ ‘ಸಂಧ್ಯಾರಾಗ’ (ಮರು ಮುದ್ರಿತ 28ನೇ ಆವೃತ್ತಿ) ಪುಸ್ತಕ ಬಿಡುಗಡೆ ಸಮಾರಂಭ (ಅ.19, ಭಾನುವಾರ)ದಲ್ಲಿ ಕೃಷ್ಣಯ್ಯ ಮಾತನಾಡುತ್ತಿದ್ದರು.
ಅ.ನ.ಕೃ ಅವರ ಕಾದಂಬರಿಗಳ ಮೌಲ್ಯ ಮಾಪನಕ್ಕಿಂತ ಚಿಂತನೆ ನಡೆಯಬೇಕಾಗಿದೆ ಎಂದ ಕೃಷ್ಣಯ್ಯ, ಕನ್ನಡ ಸಾಂಸ್ಕೃತಿಕ ಬದುಕಿನ ಮಾನ್ಯತೆಗೆ ಹೋರಾಡಿದ ಚೇತನ ಎಂದು ಅ.ನ.ಕೃಷ್ಣರಾಯರನ್ನು ಬಣ್ಣಿಸಿದರು.
ಅ.ನ.ಕೃ ಕಾದಂಬರಿಗಳು ಸಮಕಾಲೀನ ಸಾಮಾಜಿಕ ಮೌಲ್ಯಗಳು ಹಾಗೂ ಆಂತರಿಕ ಜಂಜಾಟಗಳ ಬಗ್ಗೆ ಬೆಳಕು ಚೆಲ್ಲುತ್ತವೆ ಎಂದು ಪುಸ್ತಕ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಹೇಳಿದರು. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ ಹಾಗೂ ಅಂಕಿತ ಪುಸ್ತಕದ ಪ್ರಕಾಶ್ ಕಂಬತ್ತಳ್ಳಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಅ.ನ.ಕೃ ‘ಸಂಧ್ಯಾರಾಗ’ ಮರು ಮುದ್ರಣ
ಮುಖಪುಟ / ವಾರ್ತೆಗಳು
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications