ಸರ್ಕಾರಿನೌಕರರ ಅನುಕೂಲಕ್ಕೆ ತಕ್ಕಂತೆ ಕೆಲಸದ ಟೈಂ ಹೊಂದಾಣಿಕೆ
ಸರ್ಕಾರಿನೌಕರರ ಅನುಕೂಲಕ್ಕೆ ತಕ್ಕಂತೆ ಕೆಲಸದ ಟೈಂ ಹೊಂದಾಣಿಕೆ
ಮುಂದಿನ ವರ್ಷದಾರಂಭದಲ್ಲಿ ‘ಬೆಂಗಳೂರು ಒನ್’ ಪೋರ್ಟಲ್ ಯೋಜನೆ ಜಾರಿಗೆ
ವಿಶ್ವ ಬ್ಯಾಂಕ್ ಹಾಗೂ ಐಎಂಎಫ್ (ಇಂಟರ್ನ್ಯಾಷನಲ್ ಮಾನಿಟರಿ ಫಂಡ್) ನಲ್ಲಿ ನೌಕರರು ತಮ್ಮ ಅಗತ್ಯಕ್ಕೆ ತಕ್ಕಂತೆ ಕಚೇರಿಗೆ ಬಂದು ಹೋಗುವ ಸವಲತ್ತಿದೆ. ತಿಂಗಳಿಗೆ ಎಷ್ಟು ತಾಸು ಕೆಲಸ ಮಾಡಬೇಕೋ ಅದನ್ನು ಪೂರೈಸಿದರೆ ಆಯಿತು. ಉದಾಹರಣೆಗೆ ಒಂದು ದಿನ ಕೇವಲ ನಾಲ್ಕು ತಾಸು ಕೆಲಸ ಮಾಡಿರುತ್ತಾರೆ ಎಂದಿಟ್ಟುಕೊಳ್ಳಿ. ಈ ಕಡಿತ ಅವಧಿಯನ್ನು ಒಂದು ತಿಂಗಳೊಳಗಾಗಿ ಹೆಚ್ಚುವರಿ ಕೆಲಸ ಮಾಡಿ ತುಂಬಬೇಕಾಗುತ್ತದೆ. ಈ ನೌಕರ ಸ್ನೇಹಿ ಪ್ರಾಯೋಗಿಕ ಯೋಜನೆ ಸದ್ಯದಲ್ಲೇ ಜಾರಿಗೆ ಬರಲಿದೆ ಎಂದು ಕರ್ನಾಟಕ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ.ಮಿಶ್ರ ಹೇಳಿದರು.
ನವೆಂಬರ್ 13ರಿಂದ 15ನೇ ತಾರೀಕಿನವರೆಗೆ ಚೆನ್ನೈನಲ್ಲಿ ನಡೆಯಲಿರುವ 7ನೇ ರಾಷ್ಟ್ರೀಯ ಇ- ಆಡಳಿತ ಸಮಾವೇಶಕ್ಕೆ ಪೂರ್ವಭಾವಿ ತಯಾರಿ ನಡೆಸುವ ಸಲುವಾಗಿ ಬೆಂಗಳೂರಲ್ಲಿ ನಡೆಯುತ್ತಿರುವ ಇ- ಆಡಳಿತ ಕಮ್ಮಟದಲ್ಲಿ ಭಾಗವಹಿಸಿ ಮಿಶ್ರ ಸೋಮವಾರ (ಅ. 20) ಪ್ರಾಸ್ತಾವಿಕ ಭಾಷಣ ಮಾಡಿದರು.
ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಹಾಗೂ ಮೈಕ್ರೋಸಾಫ್ಟ್ ನಡುವೆ 2002 ನವೆಂಬರ್ನಲ್ಲಾದ ಮಾತುಕತೆ ಪ್ರಕಾರ ನಾಗರಿಕ ಪೋರ್ಟಲ್ ಯೋಜನೆ ‘ಬೆಂಗಳೂರು ಒನ್’ ಜಾರಿಗೆ ಬರಬೇಕಿತ್ತು. ಆದರೆ ಅನೇಕ ತೊಂದರೆಗಳ ಕಾರಣ ಅದು ಸಾಧ್ಯವಾಗಿಲ್ಲ. ಮುಂದಿನ ವರ್ಷದಾರಂಭದಲ್ಲಿ ಇದು ಸಾಧ್ಯವಾಗಲಿದೆ ಎಂದರು.
ಭೂದಾಖಲೆಗಳ ಕಂಪ್ಯೂಟರೀಕರಣ ಯೋಜನೆ ‘ಭೂಮಿ’ ಸಾಕಷ್ಟು ಯಶಸ್ವಿಯಾಗಿದೆ. ಇದಲ್ಲದೆ ಇ- ಆಡಳಿತದ ಹಾದಿಯಲ್ಲಿರುವ ಇತರೆ ಕೆಲಸಗಳು ಆಂಧ್ರಪ್ರದೇಶದ ‘ಇ- ಸೇವೆ’ ಯೋಜನೆಯನ್ನೂ ಮೀರಿಸುವಂತೆ ರೂಪುಗೊಳ್ಳುತ್ತಿವೆ. ‘ಬೆಂಗಳೂರು ಒನ್’ ಜಾರಿಗೆ ಬಂದ ಮೇಲೆ ಅದರ ಉಪಯೋಗ ಗೊತ್ತಾಗುತ್ತದೆ ಎಂದು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications