ನವೆಂಬರ್ನಿಂದ ಇನ್ನೊಂದು ವರ್ಷ ‘ಕನ್ನಡಿಗರಿಗೆ ಉದ್ಯೋಗ ವರ್ಷ’
ನವೆಂಬರ್ನಿಂದ ಇನ್ನೊಂದು ವರ್ಷ ‘ಕನ್ನಡಿಗರಿಗೆ ಉದ್ಯೋಗ ವರ್ಷ’
ರಾಜ್ಯ ಸ್ಥಾಪನೆಯಾದ 50ನೇ ವರ್ಷಾಚರಣೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಿದ್ಧತೆ
ಸೋಮವಾರ (ಅ. 20) ಸುದ್ದಿಗಾರರಿಗೆ ಪ್ರಾಧಿಕಾರದ ಅಧ್ಯಕ್ಷ ಬಿ.ಎಂ.ಇದಿನಬ್ಬ ಈ ವಿಷಯ ತಿಳಿಸಿದರು. ಬೆಂಗಳೂರು ನಗರ ಹಾಗೂ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ವಿಚಾರ ಸಂಕಿರಣಗಳನ್ನು ನಡೆಸುವುದರ ಜೊತೆಗೆ ಸರ್ಕಾರದ ಅಧೀನದಲ್ಲಿರುವ ಖಾಸಗಿ ಕೈಗಾರಿಕೆಗಳ ಮಂಡಳಿಗಳಿಗೆ ಸರೋಜಿನಿ ಮಹಿಷಿ ಸಮಿತಿಯ ಶಿಫಾರಸ್ಸುಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರನ್ನು ಕೇಳಿಕೊಳ್ಳಲಾಗಿದೆ ಎಂದು ಇದಿನಬ್ಬ ಹೇಳಿದರು.
ಕನ್ನಡ ಅಭಿವೃದ್ಧಿಯ ನಿಟ್ಟಿನಲ್ಲಿ ಪ್ರಾಧಿಕಾರ ಕೈಗೊಂಡಿರುವ ಕ್ರಮಗಳು-
- ಜಿಲ್ಲೆಗಳಲ್ಲಿ ಕನ್ನಡದ ಯಶಸ್ವಿ ಬಳಕೆಯ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಯಲ್ಲೂ ಜಾಗೃತ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
- ಅಂಗಡಿ ಮುಂಗಟ್ಟು ಮತ್ತಿತರ ಸಂಸ್ಥೆಗಳ ನಾಮ ಫಲಕಗಳು ಕನ್ನಡದಲ್ಲಿಯೇ ಇರುವುದನ್ನು ಖಾತರಿ ಪಡಿಸಿಕೊಳ್ಳಲು ಅಧಿಕಾರಿಗಳ ಮತ್ತು ಅಧಿಕಾರೇತರ ಸದಸ್ಯರ ತನಿಖಾ ತಂಡಗಳನ್ನು ರಚಿಸಲಾಗಿದೆ.
- ಸರ್ಕಾರಿ ಕಚೇರಿಗಳಿಗೆ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ, ಕನ್ನಡ ಅನುಷ್ಠಾನವನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲಿದ್ದಾರೆ. ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೂ ನೆರವು ನೀಡಲಿದ್ದಾರೆ.
- ಇನ್ನೆರಡು ತಿಂಗಳೊಳಗೆ ‘ಅಕ್ಷರ ಸಾಹಿತ್ಯ ಯೋಜನೆ’ಯಡಿ ಮಾಹಿತಿ ಕೈಪಿಡಿ ಮಾಲೆ ಮತ್ತು ಕನ್ನಡ ಕಲಿಕಾ ಪುಸ್ತಕಗಳು ಪ್ರಕಟವಾಗಲಿವೆ.
- 2006ನೇ ಇಸವಿಯಲ್ಲಿ ರಾಜ್ಯ ಸ್ಥಾಪನೆಯ 50ನೇ ವರ್ಷವನ್ನು ‘ಸುವರ್ಣ ಕರ್ನಾಟಕ’ ಎಂದು ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂದರ್ಭದಲ್ಲಿ ‘ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಮಹನೀಯರು’ ಎಂಬ ಗ್ರಂಥ ಪ್ರಕಟಿಸಲು ಸಂಪಾದಕರ ಮಂಡಳಿ ರಚಿಸಲಾಗಿದೆ.
- ಕರ್ನಾಟಕ ಮತ್ತು ಕನ್ನಡದ ಬಗ್ಗೆ ಮಾಹಿತಿ ಕೊಡುವ ‘ಕನ್ನಡ ಚಿಂತನೆ’ ಎಂಬ ಇನ್ನೊಂದು ಪುಸ್ತಕ ಪ್ರಕಟಿಸಲು ಪ್ರಾಧಿಕಾರ ನಿರ್ಧರಿಸಿದೆ.
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications