ಉಡುಪಿ ಸಂಸದ ವಿನಯಕುಮಾರ ಸೊರಕೆ ಮಾತನಾಡುತ್ತಿದ್ದಾರೆ...
ಉಡುಪಿ ಸಂಸದ ವಿನಯಕುಮಾರ ಸೊರಕೆ ಮಾತನಾಡುತ್ತಿದ್ದಾರೆ...
ಜನ ಸ್ಪಂದನ ಮಾದರಿಯಲ್ಲಿ ಅಕ್ಟೋಬರ್ 27ರಿಂದ ಸೊರಕೆ ನೇತೃತ್ವದಲ್ಲಿ ಕ್ರಾಂತಿಯಾತ್ರೆ
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟ- ಕೇಂದ್ರ ಸರ್ಕಾರದ ಆಡಳಿತ ವೈಖರಿಯ ಕುರಿತು ಸೊರಕೆಯವರಿಗೆ ಅಸಮಾಧಾನ. ರಾಜ್ಯದ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನು ಕೇಂದ್ರ ಸರ್ಕಾರ ಗಾಳಿಗೆ ತೂರಿದೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೊರಕೆ ದೂರಿದರು.
ಕಾಂಗ್ರೆಸ್ಸಿಗ ಸೊರಕೆಯವರ ದೂರುಗಳು ಮುಖ್ಯವಾಗಿ ಮೂರು. ಮೊದಲನೆಯದು ಕೇಂದ್ರ ಸರ್ಕಾರ ರಾಜ್ಯದ ಬರ ಪರಿಹಾರ ಕಾಮಗಾರಿಗೆ ಸೂಕ್ತ ನೆರವು ನೀಡುತ್ತಿಲ್ಲ ಎನ್ನುವುದು. ಮೀನುಗಾರರ ಸಮುದಾಯ ಹಾಗೂ ಬೀಡಿ ಕಾರ್ಮಿಕರಿಗೆ ಪ್ಯಾಕೇಜ್ ಒದಗಿಸದಿರುವುದು ಇನ್ನೆರಡು ದೂರುಗಳು.
ಉಡುಪಿಯನ್ನು ಪ್ರತ್ಯೇಕ ಟೆಲಿಕಾಂ ಜಿಲ್ಲೆಯನ್ನಾಗಿ ರೂಪಿಸುವ ಕೇಂದ್ರ ಸರ್ಕಾರದ ನೀತಿಯ ಕುರಿತೂ ವಿನಯಕುಮಾರ ಸೊರಕೆ ವಿರೋಧ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವೇನಾದರೂ ಉಡುಪಿಯನ್ನು ಟೆಲಿಕಾಂ ಜಿಲ್ಲೆಯಾಗಿ ರೂಪಿಸಲು ಮುಂದಾದರೆ, ಕಾಂಗ್ರೆಸ್ ಪಕ್ಷ ಉಗ್ರವಾಗಿ ಪ್ರತಿಭಟಿಸುತ್ತದೆಂದು ಎಚ್ಚರಿಕೆಯನ್ನೂ ನೀಡಿದರು.
ಕೇಂದ್ರದಿಂದ ರಾಜ್ಯದತ್ತ ಬಂದರೆ- ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ನಾಲ್ಕು ವರ್ಷಗಳ ಆಳ್ವಿಕೆಯ ಕುರಿತು ಸೊರಕೆಯವರಿಗೆ ತೃಪ್ತಿಯಿದೆ. ಕೃಷ್ಣ ಸರ್ಕಾರದ 4 ವರ್ಷದ ಸಾಧನೆಗಳನ್ನು ಜನರಿಗೆ ತಲುಪಿಸಲೋಸುಗ ಶಿರೂರಿನಿಂದ ಉಡುಪಿಯವರೆಗೆ ಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಸೊರಕೆ ತಿಳಿಸಿದರು. ಈ ಕ್ರಾಂತಿ ಯಾತ್ರೆ ಅಕ್ಟೋಬರ್ 27ರಿಂದ 31 ರವರೆಗೆ ನಡೆಯಲಿದೆ.
ಅ.31 ರಂದು ಬೃಹತ್ ಸಾರ್ವಜನಿಕ ಸಭೆ ನಡೆಸಿ ಪಾಂಚಜನ್ಯ ಊದುವುದು ಸೊರಕೆಯವರ ಉದ್ದೇಶ. ಲೋಕಸಭೆ ಚುನಾವಣೆಗಳು ಹತ್ತಿರದಲ್ಲಿವೆ, ಅಲ್ಲವೇ ?
(ಪಿಟಿಐ/ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications