ಹಳಿ ತಪ್ಪಿದ ಮೈಸೂರು-ಬೆಂಗಳೂರು ರೈಲು, 4 ಸಾವು
ಹಳಿ ತಪ್ಪಿದ ಮೈಸೂರು-ಬೆಂಗಳೂರು ರೈಲು, 4 ಸಾವು
ಗಾಯಗೊಂಡ 54 ಪ್ರಯಾಣಿಕರ ಪೈಕಿ 13 ಮಂದಿ ಕೆ.ಆರ್. ಆಸ್ಪತ್ರೆಗೆ
ಮಂಡ್ಯ ಜಿಲ್ಲೆಯ ಪೊಲೀಸ್ ಸೂಪರಿಂಟೆಂಡೆಂಟ್ ಆರ್.ಹಿತೇಂದ್ರ ಸುದ್ದಿಗಾರರ ಜೊತೆ ಮಾತಾಡುತ್ತಾ- ಈವರೆಗೆ ನಾಲ್ಕು ಮಂದಿ ಸತ್ತಿದ್ದು, ಅಷ್ಟೂ ಶವಗಳು ಸಿಕ್ಕಿವೆ. ತೀವ್ರವಾಗಿ ಗಾಯಗೊಂಡ 13 ಪ್ರಯಾಣಿಕರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರು ಕಾಣೆಯಾಗಿದ್ದು, ಒಟ್ಟು 54 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸಯ್ಯದ್ ತಹ್ಸೀನಾ, ಅಶೀನಾ, ಪ್ರಭಾಮಣಿ ಮತ್ತು ಮಂಜುಳ ಅಪಘಾತಕ್ಕೆ ತುತ್ತಾದ ನತದೃಷ್ಟರು ಎಂದು ಹೇಳಿದರು.
ಒಂದು ಬೋಗಿಯ ಚಕ್ರದ ‘ಡಿಸ್ಕ್’ ಮುರಿದ ಕಾರಣ ರೈಲಿನ ಕೊನೆ ನಾಲ್ಕು ಬೋಗಿಗಳು ಹಳಿ ತಪ್ಪಿದವು. ಈ ಅಪಘಾತದ ಕಾರಣ ಮೈಸೂರು ಮಾರ್ಗದ 7 ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇಡೀ ಘಟನೆಯ ಬಗ್ಗೆ ದಕ್ಷಿಣ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತರು ಸಮಗ್ರ ತನಿಖೆ ನಡೆಸಲಿದ್ದಾರೆ. ಕೇಂದ್ರ ರೈಲ್ವೆ ಸಚಿವ ನಿತೀಶ್ ಕುಮಾರ್ ಸ್ಥಳಕ್ಕೆ ಭೇಟಿ ಕೊಟ್ಟು, ಘಟನೆಯ ವಿವರಗಳನ್ನು ಪಡೆದರು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಪರಿಹಾರ : ದುರಂತದಲ್ಲಿ ಮೃತಪಟ್ಟಿರುವವರ ಕುಟುಂಬಕ್ಕೆ ತಲಾ 1 ಲಕ್ಷ ರುಪಾಯಿ, ತೀವ್ರವಾಗಿ ಗಾಯಗೊಂಡವರಿಗೆ 25 ಸಾವಿರ ರುಪಾಯಿ ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ 5 ಸಾವಿರ ರುಪಾಯಿ ಪರಿಹಾರವನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಬಸವನಗೌಡ ಪಾಟೀಲ್ ಪ್ರಕಟಿಸಿದ್ದಾರೆ.
ಎಸ್ಸೆಂ ಕೃಷ್ಣ ಸಂತಾಪ : ರೈಲು ದುರಂತದಿಂದ ದಿಗ್ಭ್ರಮೆಗೊಂಡ ಕರ್ನಾಟಕದ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿನ ಕೆಲಸಗಳ ಬಗ್ಗೆ ಗಮನ ಹರಿಸಲು ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರೊ. ಬಿ.ಕೆ.ಚಂದ್ರಶೇಖರ್ ಅವರನ್ನು ಕಳಿಸಿದ್ದಾರೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ಬೋಗಿಗಳ ಚಕ್ರಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅದನ್ನು ನೋಡಲು ನೂರಾರು ಗ್ರಾಮಸ್ಥರು ಜಮಾಯಿಸಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ನಿತ್ಯ ಕಚೇರಿಗೆ ಬರುವ ಅನೇಕ ಪ್ರಯಾಣಿಕರು ಪುಷ್- ಪುಲ್ ರೈಲಿನಲ್ಲಿದ್ದರು. ಹಳಿ ತಪ್ಪಿರುವ ಬೋಗಿಗಳ ಒಳಗೆ ಹಾಗೂ ಅಡಿಯಲ್ಲಿ ಯಾರಾದರೂ ಸಿಲುಕಿರಬಹುದೆ ಎಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪೊಲೀಸ್ ಹಾಗೂ ಸ್ಥಳೀಯ ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾಮಗಾರಿಗಳು ಚುರುಕಾಗುವಂತೆ ನೋಡಿಕೊಳ್ಳುತ್ತಿದ್ದಾರೆ.
ಹೆಚ್ಚಿನ ಮಾಹಿತಿಗೆ ಈ ಸಹಾಯ ವಾಣಿಗಳ ಸಂಪರ್ಕಿಸಿ : (080) 2873103, (080) 2871932, (080) 2876288.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications