ಮಂಗಳವಾರ ಸಿಎಂ ಎಸ್ಸೆಂ ಮನೆಗೆ ‘ದೇವೇಗೌಡ ಮಾರ್ಚ್’ !
ಮಂಗಳವಾರ ಸಿಎಂ ಎಸ್ಸೆಂ ಮನೆಗೆ ‘ದೇವೇಗೌಡ ಮಾರ್ಚ್’ !
ನಿಷೇಧವನ್ನು ಧಿಕ್ಕರಿಸಿ ದೇವೇಗೌಡರ ದಂಡು ಕೃಷ್ಣ ಮನೆಗೆ ಹೋಗಲಿದೆ
ಸೋಮವಾರ ಸುದ್ದಿಗಾರರ ಜೊತೆ ದೇವೇಗೌಡ ಮಾತಾಡುತ್ತಿದ್ದರು. ಹಾಸನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬಿದ್ದಿದೆ. ತಮ್ಮ ಪಕ್ಷದವರೂ ಸೇರಿದಂತೆ ಅಮಾಯಕರನ್ನು ಪೊಲೀಸರು ಬೆಂಡೆತ್ತಿದ್ದರು. ಇದಕ್ಕೆ ತಕ್ಕ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮೂರು ಮನವಿ ಪತ್ರ ಬರೆದೆ. ಆದರೆ ಅದು ದಿವ್ಯ ನಿರ್ಲಕ್ಷ್ಯ ತೋರಿತು. ತಮ್ಮ ಪಕ್ಷ- ಜಾತ್ಯತೀತ ಜನತಾ ದಳದ ರಾಜ್ಯ ಘಟಕದ ಐದರಿಂದ ಹತ್ತು ಮುಖಂಡರೊಡನೆ ಈಗ ನೇರವಾಗಿ ಮುಖ್ಯಮಂತ್ರಿಗಳ ಮನೆಗೆ ಹೋಗಿ, ನ್ಯಾಯ ಕೇಳುವುದಾಗಿ ಹೇಳಿದ ಗೌಡರು ಯಾರಿಗೂ ಹೆದರುವುದಿಲ್ಲ. ಪೊಲೀಸರು ಏನು ಮಾಡುವರೋ ಮಾಡಲಿ ಎಂದು ಸವಾಲು ಹಾಕಿದರು.
ಹಾಸನದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಕೆಟ್ಟದಾಗಿ ದಂಡಿಸಿದ್ದಾರೆ. ಇದಕ್ಕೆ ಪೊಲೀಸರ ವಿರುದ್ಧ ತೆಗೆದುಕೊಳ್ಳಬೇಕಾದ ಕನಿಷ್ಠ ಕ್ರಮವನ್ನೂ ಸರ್ಕಾರ ತೆಗೆದುಕೊಂಡಿಲ್ಲ. ಕೃಷ್ಣ ಅವರದ್ದು ಕಳಪೆ ಅಧಿಕಾರ. ದೌರ್ಜನ್ಯ ತಪ್ಪಿಸಿ ಎಂಬ ಮೊರೆಯ ಪತ್ರಗಳ ಬಗ್ಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಕರ್ತವ್ಯಚ್ಯುತಿಗೆ ಧಿಕ್ಕಾರ ಎಂದು ದೇವೇಗೌಡರು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಇನ್ನೂ ಎಲ್ಲೆಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ಚರ್ಚಿಸಲು ಅ. 29 ರಂದು ತಮ್ಮ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ ಕರೆದಿರುವುದಾಗಿ ಹೇಳಿದ ಗೌಡರು, ಮುಂದೇನು ಮಾಡಬೇಕು ಎಂಬುದನ್ನು ಸಭೆಯಲ್ಲಿ ತೀರ್ಮಾನಿಸಲಿದ್ದೇವೆ ಎಂದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications