ರಾಜ್ಯೋತ್ಸವ ಕೊಡುಗೆ-ಗ್ರಾಮೀಣ ಕೃಪಾಂಕ ನೌಕರರಿಗೆ ಮತ್ತೆ ಕೆಲಸ
ರಾಜ್ಯೋತ್ಸವ ಕೊಡುಗೆ-ಗ್ರಾಮೀಣ ಕೃಪಾಂಕ ನೌಕರರಿಗೆ ಮತ್ತೆ ಕೆಲಸ
‘ನವೆಂಬರ್ ಮೊದಲ ವಾರದಲ್ಲಿ ನೌಕರಿಗೆ ಸೇರಿಸಿಕೊಳ್ಳುವ ಆದೇಶ’
ಕೃಂಪಾಕದ ಕಾರಣ ಕೆಲಸ ಕಳೆದುಕೊಂಡಿರುವ ನೌಕರರಿಗೆ ನವೆಂಬರ್ ಮೊದಲ ವಾರದೊಳಗೆ ಸರ್ಕಾರಿ ಕೆಲಸ ಕೊಡಲಾಗುವುದು. ಆದರೆ ಈ ಹಿಂದೆ ಮಾಡಿದ ಕೆಲಸದ ಅವಧಿಯನ್ನು ಹಿರಿತನ ನಿರ್ಧಾರಕ್ಕೆ ಹಾಗೂ ಬಡ್ತಿ ಕೊಡಲು ಪರಿಗಣಿಸಲಾಗುವುದಿಲ್ಲ. ಇದು ಹೊಸ ನೇಮಕಾತಿಯೂ ಅಲ್ಲ, ಹಳೆಯ ಸೇವೆಯ ಮುಂದುವರಿಕೆಯೂ ಅಲ್ಲ ಎಂದು ಕಾನೂನು ಸಚಿವ ಡಿ.ಬಿ.ಚಂದ್ರೇಗೌಡ ಸೋಮವಾರ (ಅ. 27) ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಆರೋಗ್ಯ ಸಚಿವ ಕಾಗೋಡು ತಿಮ್ಮಪ್ಪ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಕೃಪಾಂಕದ ಕಾರಣ ಕೆಲಸ ಕಳೆದುಕೊಂಡವರಿಗೆ ಮತ್ತೆ ಸರ್ಕಾರಿ ಕೆಲಸ ಕೊಡುವ ಅಂತಿಮ ಅಧಿಸೂಚನೆ ಸಿದ್ಧವಾಗಿದೆ. ಸದ್ಯದಲ್ಲೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಧಿಸೂಚನೆಗೆ ಹಸಿರು ನಿಶಾನೆ ಪಡೆಯಲಾಗುವುದು ಎಂದು ಸಚಿವರೆಲ್ಲರೂ ಹೇಳಿದರು.
ಆಗಸ್ಟ್ 28ನೇ ತಾರೀಕು ಕರಡು ಅಧಿಸೂಚನೆ ಸಿದ್ಧವಾಗಿತ್ತು. ಆದರೆ 208 ಆಕ್ಷೇಪಗಳು ವ್ಯಕ್ತವಾದ ಕಾರಣ ಸೂಕ್ತ ತಿದ್ದುಪಡಿ ತಂದು, ಅಂತಿಮ ಅಧಿಸೂಚನೆ ಸಿದ್ಧಪಡಿಸಲಾಗಿದೆ ಎಂದು ಚಂದ್ರೇಗೌಡ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಲ್ಲಿ ಆಗುತ್ತಿರುವ ವಿಳಂಬಕ್ಕೆ ಕಾರಣ ಕೊಟ್ಟರು.
ಕೆಲಸ ಕಳೆದುಕೊಂಡಿರುವವರ ಪೈಕಿ 3489 ಶಿಕ್ಷಕರೇ ಇದ್ದಾರೆ. ಈಗ ಅನೇಕರು ಹತಾಶರಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ತಪ್ಪು ನಿರ್ಧಾರ. ಆತುರದಲ್ಲಿ ಚಳವಳಿ, ಪ್ರತಿಭಟನೆ ನಡೆಸುವವರೂ ಹೆಚ್ಚಾಗುತ್ತಿದ್ದಾರೆ. ಇದು ತರವಲ್ಲ. ಯಾವುದೇ ಕಾರಣಕ್ಕೂ ಪ್ರಾಣ ಕಳೆದುಕೊಳ್ಳಬೇಡಿ. ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನ ಪಟ್ಟ ಕಾರಣ ರಾಜ್ಯೋತ್ಸವದ ಸಂದರ್ಭದಲ್ಲಿ ಕೆಲಸವನ್ನು ಮತ್ತೆ ಕೊಡಿಸಲು ಸಾಧ್ಯವಾಗುತ್ತಿದೆ. ಇದು ಕೇವಲ ಮಾನವೀಯ ನೆಲೆಗಟ್ಟಿನಲ್ಲಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಎಂದು ಸಚಿವರು ನೌಕರರಿಗೆ ಕಿವಿಮಾತು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications