ದಟ್ಸ್ಕನ್ನಡ.ಕಾಂ ಮುಂಭಾಗದ ಮೇಲುಸೇತುವೆ ಉದ್ಘಾಟನೆ
ದಟ್ಸ್ಕನ್ನಡ.ಕಾಂ ಮುಂಭಾಗದ ಮೇಲುಸೇತುವೆ ಉದ್ಘಾಟನೆ
ಬೆಂಗಳೂರಿನ ಶ್ವಾಸಕೋಶಕ್ಕೆ ಒಂಚೂರು ನಿರಾಳ
(ದಟ್ಸ್ಕನ್ನಡ ವರದಿ) ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 7, ಹೊಸೂರು ರಸ್ತೆಯ https://www.oneindia.com ಬಳಿ ನಿರ್ಮಿಸಲಾಗಿರುವ ನೂತನ ಮೇಲು ಸೇತುವೆಯನ್ನು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಗುರುವಾರ ಬೆಳಗ್ಗೆ ಸಂಚಾರಕ್ಕೆ ಅನಾವರಣಗೊಳಿಸಿದರು.
ಗುರುವಾರ (ಅ.30) ಬೆಳಗ್ಗೆ 11ರ ಸುಮಾರಿಗೆ ಟೇಪು ಕತ್ತರಿಸುವ ಮೂಲಕ ಮೇಲು ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ ಮುಖ್ಯಮಂತ್ರಿ ಕೃಷ್ಣ , ಸೇತುವೆಯ ಮೇಲೆ ಅಡ್ಡಾಡಿ ಕಾಮಗಾರಿಯನ್ನು ವೀಕ್ಷಿಸಿದರು. 1 ಗಂಟೆ ವಿಳಂಬವಾಗಿ ಆಗಮಿಸಿದ ಮುಖ್ಯಮಂತ್ರಿ ಕೃಷ್ಣ , ಸುರಿಬಿಸಿಲಿನಲ್ಲಿ ಕಾದಿದ್ದ ನಾಗರಿಕರನ್ನು ಕಾಯಿಸಿದರು. ಕಾರ್ಯಕ್ರಮದ ಪ್ರಯುಕ್ತ 45 ನಿಮಿಷಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು .
ಮೇಲು ಸೇತುವೆಯ ಅನಾವರಣದಿಂದಾಗಿ ಕೇಂದ್ರ ರೇಷ್ಮೆ ಮಂಡಳಿ ವೃತ್ತದ ಬಳಿಯ ಸಂಚಾರ ದಟ್ಟಣೆಗೆ ಪರಿಹಾರ ದೊರೆತಿದ್ದು, ನಾಗರಿಕರು ನೆಮ್ಮದಿಯ ಉಸಿರುಬಿಡುವಂತಾಗಿದೆ. ಎರಡೂ ಬದಿಯ ತಲಾ ಮೂರು ಪಥ ಒಳಗೊಂಡಿರುವ ಬೆಂಗಳೂರಿನ ಮೊದಲ ಮೇಲು ಸೇತುವೆ ಇದಾಗಿದೆ. 530 ಮೀಟರ್ ಉದ್ದದ ಈ ಮೇಲುರಸ್ತೆಯ ನಿರ್ಮಾಣಕ್ಕೆ 20 ಕೋಟಿ ರುಪಾಯಿಗೂ ಅಧಿಕ ವೆಚ್ಚ ತಗುಲಿದೆ.
ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಬಿ.ಕೆ.ಚಂದ್ರಶೇಖರ್, ಬಿಡಿಎ ಆಯುಕ್ತ ಜಯಕರ್ ಜೆರೋಮ್, ಶಾಸಕರಾದ ಅಶೋಕ್ ಹಾಗೂ ಸೀತಾರಾಂ ಮೇಲು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಶಿಲಾ ಫಲಕದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೆಸರಿದೆ, ಆದರೆ ದೇವೇಗೌಡರು ಕಾರ್ಯಕ್ರಮಕ್ಕೆ ಬಂದಿರಲಿಲ್ಲ .
ಮುಖಪುಟ / ಕೃಷ್ಣಗಾರುಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications