ರಾಜ್ಯೋತ್ಸವ ಕೊಡುಗೆ-ಕಡುಬಡವರಿಗೆ ಪಡಿತರ ದರದ ದಿನಸಿ
ರಾಜ್ಯೋತ್ಸವ ಕೊಡುಗೆ-ಕಡುಬಡವರಿಗೆ ಪಡಿತರ ದರದ ದಿನಸಿ
ಬಡತನ ರೇಖೆಗಿಂತ ಕೆಳಗಿರುವ 63 ಲಕ್ಷ ಕುಟುಂಬಗಳ ತುತ್ತಿನಚೀಲಕ್ಕೆ ಚಿಂತಿಲ್ಲ
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮಲಿಂಗಾ ರೆಡ್ಡಿ ಶುಕ್ರವಾರ (ಅ. 31) ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಈಗಾಗಲೇ ಹಸಿರು ಕಾರ್ಡುಗಳ ಬದಲಿಗೆ ಹಳದಿ ಕಾರ್ಡುಗಳನ್ನು ವಿತರಿಸಲಾಗಿದೆ. ಪ್ರತಿ ಕುಟುಂಬಕ್ಕೆ ಮಾಹೆಗೊಮ್ಮೆ 28 ಕಿಲೋ ಅಕ್ಕಿ, 7 ಕಿಲೋ ಗೋಧಿ ಮತ್ತು 10 ಲೀಟರ್ ಸೀಮೆಎಣ್ಣೆಯನ್ನು ಪಡಿತರ ದರದಲ್ಲಿ ಕೊಡಲಾಗುವುದು. ಇನ್ನೂ 11 ಲಕ್ಷ ಬಡ ಕುಟುಂಬಗಳ ಅರ್ಜಿಗಳು ವಿಲೇವಾರಿಯಾಗಿಲ್ಲ. ಈ ಪೈಕಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಬಗ್ಗೆ ದೃಢೀಕೃತ ಮಾಹಿತಿ ಪಡೆದ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ನಗರದಲ್ಲಿ ವಾರ್ಷಿಕ 17 ಸಾವಿರ ರುಪಾಯಿ ಹಾಗೂ ಹಳ್ಳಿಗಳಲ್ಲಿ ವಾರ್ಷಿಕ 12 ಸಾವಿರ ರುಪಾಯಿ ಆದಾಯ ಇರುವ ಕುಟುಂಬಗಳು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹವಾಗಿರುತ್ತವೆ. ಕೆಲವು ದಿನಗಳಿಂದ ನಿಲ್ಲಿಸಿರುವ ಪಡಿತರ ದರದಲ್ಲಿ ಧಾನ್ಯ ಹಂಚಿಕೆ ಈಗ ಪುನರಾರಂಭವಾಗುತ್ತಿದೆ. ಬಡ ಜನತೆಗೆ ಇದು ಸರ್ಕಾರದ ರಾಜ್ಯೋತ್ಸವದ ಕೊಡುಗೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications