‘ಕನ್ನಡಿಗರಿಗೆ ಇರುವುದೊಂದೇ ಕನ್ನಡ ವಿವಿ, ಅದಕ್ಕೆ ನೆರವು ನೀಡಿ’
‘ಕನ್ನಡಿಗರಿಗೆ ಇರುವುದೊಂದೇ ಕನ್ನಡ ವಿವಿ, ಅದಕ್ಕೆ ನೆರವು ನೀಡಿ’
ಪ್ರಸಿದ್ಧ ಹಂಪಿ ಉತ್ಸವಕ್ಕೆ ಚಾಲನೆ, ವಿಜಯನಗರ ವೈಭವ ಪುನರುತ್ಥಾನಕ್ಕೆ ಚಿಂತನೆ
ಕನ್ನಡಿಗರಿಗೆ ಇರುವುದು ಒಂದೇ ವಿಶ್ವ ವಿದ್ಯಾಲಯ. ಆ ವಿಶ್ವವಿದ್ಯಾಲಯವನ್ನು ಉಳಿಸಲು ಸಮಸ್ತ ಕನ್ನಡಿಗರು ಉದಾರ ನೆರವು ನೀಡಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಕೃಷ್ಣ ಸೋಮವಾರ (ನ.3) ಹೇಳಿದರು. ಹಂಪಿ ವಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷ್ಣ ಮಾತನಾಡುತ್ತಿದ್ದರು. ದಶಮಾನೋತ್ಸವ ಕಟ್ಟಡ, ವಾಲ್ಮೀಕಿ ಅಧ್ಯಯನ ಪೀಠ ಉದ್ಘಾಟನೆ, ನಾದಲೀಲೆ ಸಂಗೀತ ವಿಭಾಗದ ಕಟ್ಟಡ ಶಿಲಾನ್ಯಾಸ ಹಾಗೂ 30 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನೆರವೇರಿತು.
ನಾಡು ನುಡಿ ಹಾಗೂ ನೆಲ ಜಲಗಳ ಸೇವೆಗಾಗಿ ಹಂಪಿ ವಿವಿ ಶ್ರಮಿಸುತ್ತಿದೆ. ಬೋಧನೆ, ಕಮ್ಮಟ, ಸಂವಾದಗಳ ಮೂಲಕ ವರ್ಷವಿಡೀ ಕನ್ನಡಿಗರೊಂದಿಗೆ ವಿವಿ ಸಂಪರ್ಕವಿಟ್ಟುಕೊಂಡಿದೆ. ಜನಪರ ವಿಶ್ವ ವಿದ್ಯಾಲಯಕ್ಕೆ ಬರದ ಕಾರಣ ಸರ್ಕಾರ ಹೆಚ್ಚಿನ ಅನುದಾನ ನೀಡಲಾಗುತ್ತಿಲ್ಲ . ವಿವಿಗೆ ಹೆಚ್ಚಿನ ನೆರವು ನೀಡುವ ಕುರಿತು 2004ನೇ ಇಸವಿಯ ಜನವರಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷ್ಣ ಹೇಳಿದರು.
ವಿಜಯನಗರ ವೈಭವದ ಪುನರುಜ್ಜೀವನ
ವಿಜಯನಗರ ಸಾಮ್ರಾಜ್ಯದ ವೈಭವದ ಪುನರುಜ್ಜೀವನಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಹಂಪಿ ಉತ್ಸವ ಅಂತಹ ಕಾರ್ಯಕ್ರಮಗಳಲ್ಲಿ ಪ್ರಮುಖವಾದುದು ಎಂದು ಮುಖ್ಯಮಂತ್ರಿ ಕೃಷ್ಣ ಅಭಿಪ್ರಾಯಪಟ್ಟರು. ಸೋಮವಾರ ಸಂಜೆ ಪ್ರಸಿದ್ಧ ಹಂಪಿ ಉತ್ಸವಕ್ಕೆ ಚಾಲನೆ ನೀಡಿ ಕೃಷ್ಣ ಮಾತನಾಡುತ್ತಿದ್ದರು.
ಹಂಪಿ ಉತ್ಸವದ ಮೂಲಕ ಜನರಲ್ಲಿ ಇತಿಹಾಸ ಪ್ರಜ್ಞೆಯನ್ನು ಜಾಗೃತಗೊಳಿಸುವ ಕೆಲಸ ನಡೆಸಲಾಗುತ್ತಿದೆ. ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯಗಳ ಮೆಲುಕು ಹಂಪಿ ಉತ್ಸವದಿಂದ ಸಾಧ್ಯವಾಗುತ್ತದೆ ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications