ರಾಜ್ಯದ ಎಲ್ಲಾ ರಾಷ್ಟ್ರೀಯ ಉದ್ಯಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷಿದ್ಧ
ರಾಜ್ಯದ ಎಲ್ಲಾ ರಾಷ್ಟ್ರೀಯ ಉದ್ಯಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷಿದ್ಧ
ಪ್ಲಾಸ್ಟಿಕ್ ನಿಷೇಧ ಜಾರಿಗೆ ಹಂತಹಂತವಾಗಿ ಯತ್ನ
ಕಳೆದ ವರ್ಷ ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ತಿಂದು 18 ಜಿಂಕೆಗಳು ಸತ್ತ ಹಿನ್ನೆಲೆಯಲ್ಲಿ ಅಲ್ಲಿ ಮಾತ್ರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿತ್ತು. ಇತರೆ ರಾಷ್ಟ್ರೀಯ ಉದ್ಯಾನಗಳಲ್ಲೂ ಇದೇ ಪರಿಸ್ಥಿತಿಯಿದ್ದು, ಪ್ಲಾಸ್ಟಿಕ್ ತ್ಯಾಜ್ಯದಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುವ ಅಪಾಯವಿರುವ ಕಾರಣ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಹಿರಿಯ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ರೈ ಪ್ಲಾಸ್ಟಿಕ್ ನಿಷೇಧದ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದರು. ರಾಷ್ಟ್ರೀಯ ಉದ್ಯಾನವನಗಳಿಗೆ ಬರುವ ಮಂದಿ ಪಿಕ್ನಿಕ್ ದೃಷ್ಟಿಯಲ್ಲೇ ಬರುವ ಪ್ರವಾಸಿಗರಾಗಿರುತ್ತಾರೆ. ಹೀಗಾಗಿ ಚೀಲ, ಲೋಟ- ತಟ್ಟೆ, ಕೊನೆಗೆ ಚಮಚದವರೆಗೆ ಎಲ್ಲಾ ಪ್ಲಾಸ್ಟಿಕ್ ಪದಾರ್ಥಗಳನ್ನು ತಂದು, ಉಪಯೋಗಿಸಿ ಬಿಸಾಡುವವರೇ ಹೆಚ್ಚು. ಹೀಗೆ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯ ಜೈವಿಕ ಗೊಬ್ಬರವಾಗುವುದಿಲ್ಲ. ಬದಲಿಗೆ ಮಣ್ಣಿನೊಳಗೆ ಸೇರುವ ವಿಷವಾಗುತ್ತದೆ. ಈ ತ್ಯಾಜ್ಯದ ವಿಲೇವಾರಿಯೂ ಸುಲಭದ ಕೆಲಸವಲ್ಲ ಎಂದು ರೈ ಹೇಳಿದರು.
ಪ್ಲಾಸ್ಟಿಕ್ ನಿಷೇಧವನ್ನು ಏಕಾಏಕಿ ಅನುಷ್ಠಾನಕ್ಕೆ ತರುವುದು ಸುಲಭದ ಮಾತಲ್ಲ. ಇದನ್ನು ಹಂತಹಂತವಾಗಿ ಜಾರಿಗೆ ತರುವ ಹಾದಿಯಲ್ಲಿ ನಾವಿದ್ದೇವೆ. ಈಗಾಗಲೇ ರಾಷ್ಟ್ರೀಯ ಉದ್ಯಾನಗಳ ಅಧಿಕಾರಿಗಳಿಗೆ ಪ್ಲಾಸ್ಟಿಕ್ ನಿಷೇಧಿಸಿ ಎಂದು ಸುತ್ತೋಲೆ ಹೊರಡಿಸಲಾಗಿದೆ. ಮೊದಲು ಪ್ರವಾಸಿಗರಿಗೆ ಪ್ಲಾಸ್ಟಿಕ್ ಬಳಸುವುದರಿಂದ ಆಯಾ ಪರಿಸರದಲ್ಲಿ ಆಗುತ್ತಿರುವ ಅಪಾಯಗಳನ್ನು ಮನವರಿಕೆ ಮಾಡಿಸಲು ತೀರ್ಮಾನಿಸಲಾಗಿದೆ. ಹಾಗೆ ತಿಳಿಸಿ ಹೇಳಿದ ನಂತರವೂ ಜನ ಪ್ಲಾಸ್ಟಿಕ್ ಬಳಕೆ ನಿಲ್ಲಿಸದೆ ಇದ್ದಲ್ಲಿ ದಂಡ ವಿಧಿಸುವ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications