ಬೆಂಗಳೂರು ಕ್ರಿಕೆಟ್ ಪಂದ್ಯದ ಟಿಕೇಟುಗಳು ಬೇಗ ಸೌಲ್ಡ್ ಔಟ್
ಬೆಂಗಳೂರು ಕ್ರಿಕೆಟ್ ಪಂದ್ಯದ ಟಿಕೇಟುಗಳು ಬೇಗ ಸೌಲ್ಡ್ ಔಟ್
ಕೆಲವೇ ಗಂಟೆಗಳಲ್ಲಿ 13,500 ಟಿಕೇಟುಗಳು ಬಿಕರಿಯಾದವು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಎಣಿಸಲಾರದಷ್ಟು ಜನ ಟಿಕೇಟು ಕೊಳ್ಳಲು ಸರತಿ ಸಾಲಲ್ಲಿ ನಿಂತಿದ್ದರು. ಹಿಂದಿನ ದಿನ ರಾತ್ರಿ ಕ್ರೀಡಾಂಗಣದ ಪಕ್ಕದಲ್ಲೇ ಎಲ್ಲೆಂದರಲ್ಲಿ ಮಲಗಿ, ಎದ್ದಿದ್ದ ಮಂದಿಯ ಬಾಡಿದ ಮುಖ ಟಿಕೇಟು ಸಿಕ್ಕಾಗ ಅರಳಿತು. ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಟಿಕೇಟು ಸಿಗದವರು ಹ್ಯಾಪುಮೋರೆ ಹಾಕಿಕೊಂಡು ಮನೆಗೆ ಮರಳಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು ಸೀಟುಗಳ ಸಂಖ್ಯೆ 45 ಸಾವಿರ. ಕ್ಲಬ್ಬು, ವಿಐಪಿಗಳು, ಪತ್ರಕರ್ತರು ಇವರೆಲ್ಲರ ಕೋಟಾ ಮುಗಿದ ನಂತರ ಸಾರ್ವಜನಿಕರಿಗೆ ಮಾರಲಾದ ಟಿಕೇಟುಗಳು ಕೇವಲ 13 ಸಾವಿರದ 500. ಇದರಲ್ಲಿ ಒಂದೂವರೆ ಸಾವಿರ ಸೀಟುಗಳು ಮಹಿಳೆಯರಿಗೆ ಮಾತ್ರ ಮೀಸಲಾದವು. ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಟಿಕೇಟು ಕೊಡಲು ಶುರುಮಾಡಿದರು. ಸರತಿ ಸಾಲಿನ ನೂಕುನುಗ್ಗಲು ಪೀಕಲಾಟ ತಪ್ಪಿಸಲು ಪೊಲೀಸರು ಬೆವರು ಹರಿಸಬೇಕಾಯಿತು. ಟಿಕೇಟು ಸಿಗದೆ ಕ್ರುದ್ಧರಾದ ಕೆಲವರನ್ನು ನಿಯಂತ್ರಿಸಲು ಪೊಲೀಸರು ಪರಿ ಪಾಟಲು ಅನುಭವಿಸಿದರು. ಮಧ್ಯಾಹ್ನಕ್ಕೆ ಮುನ್ನವೇ ಟಿಕೇಟುಗಳೆಲ್ಲ ಬಿಕರಿಯಾಗಿಹೋದವು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications