ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧರ್ಮಸ್ಥಳದ ಕ್ಷೇತ್ರದಲ್ಲಿ ನ. 22ರಂದು ಸರ್ವಧರ್ಮ ಸಮ್ಮೇಳನ

By Staff
|
Google Oneindia Kannada News

ಧರ್ಮಸ್ಥಳದ ಕ್ಷೇತ್ರದಲ್ಲಿ ನ. 22ರಂದು ಸರ್ವಧರ್ಮ ಸಮ್ಮೇಳನ
ಸಮ್ಮೇಳನಾಧ್ಯಕ್ಷರಾಗಿ ಡಾ. ಎಂ. ಎಂ. ಕಲಬುರ್ಗಿ

ಉಜಿರೆ: ಧರ್ಮಸ್ಥಳ ದೇವಸ್ಥಾನದಲ್ಲಿ ನವೆಂಬರ್‌ 22 ಮತ್ತು 23ರಂದು ಸರ್ವ ಧರ್ಮ ಸಾಹಿತ್ಯ ಸಮ್ಮೇಳನಗಳು ನಡೆಯಲಿವೆ. ಸಮ್ಮೇಳನದ ಅಧ್ಯಕ್ಷರಾಗಿ ಹಂಪಿಯ ಕನ್ನಡ ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಡಾ. ಎಂ. ಎಂ. ಕಲಬುರ್ಗಿ ಅವರು ಆಯ್ಕೆಯಾಗಿದ್ದಾರೆ.

ನವೆಂಬರ್‌ 22 ರಂದು ಸರ್ವಧರ್ಮ ಸಮ್ಮೇಳನವನ್ನು ರಾಜ್ಯಪಾಲ ಟಿ. ಎನ್‌. ಚತುರ್ವೇದಿ ಉದ್ಘಾಟಿಸುವರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೆಂಗಳೂರಿನ ಖ್ಯಾತ ವಿದ್ವಾಂಸ ಪ್ರೊ. ಎಸ್‌. ಕೆ. ರಾಮಚಂದ್ರರಾಯರು ವಹಿಸುವರು.

ಸಮ್ಮೇಳನದಲ್ಲಿ ಹಿಂದೂ ಧರ್ಮ, ಕ್ರೆೃಸ್ತ ಮತ ಹಾಗೂ ಮುಸ್ಲಿಂ ಮತದ ಧಾರ್ಮಿಕ ನಾಯಕರು ಭಾಗವಹಿಸುವದಲ್ಲದೇ, ಚಿತ್ರದುರ್ಗದ ಪ್ರೊ. ಶ್ರೀಶೈಲಾರಾಧ್ಯ, ಮೈಸೂರಿನ ಪ್ರೊ. ಕೆ. ಅನಂತ ರಾಮು ಮತ್ತು ಬಿಜಾಪುರ ವಿಶ್ವ ವಿದ್ಯಾಲಯದ ನಿರ್ದೇಶಕ ಡಾ. ಎಂ. ಬಿ. ದಿಲ್‌ಶಾದ್‌ ಸಮ್ಮೇಳನದಲ್ಲಿ ಉಪನ್ಯಾಸಗಳನ್ನು ಮಾಡುವರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X