ಮಕ್ಕಳದಿನಾಚರಣೆಯಂದು ಅನಾಥ ಮಕ್ಕಳಿಗೆ ಕೆಎಸ್ಟಿಡಿಸಿ ಸಫಾರಿ
ಮಕ್ಕಳದಿನಾಚರಣೆಯಂದು ಅನಾಥ ಮಕ್ಕಳಿಗೆ ಕೆಎಸ್ಟಿಡಿಸಿ ಸಫಾರಿ
ವಾಣಿಜ್ಯ ಸಂಸ್ಥೆಗಳ ಸಹಯೋಗದೊಂದಿಗೆ ಮಕ್ಕಳಿಗೆ ಉಡುಗೊರೆ-ಪ್ರವಾಸ
ಬೆಂಗಳೂರಿನ ವಿವಿಧ ಅನಾಥಾಶ್ರಮಗಳ ಸುಮಾರು 1000 ಮಕ್ಕಳನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ 1 ದಿನದ ಸಫಾರಿಗೆ ಕೊಂಡೊಯ್ಯಲು ಕೆಎಸ್ಟಿಡಿಸಿ ಉದ್ದೇಶಿಸಿದೆ. ಈ ಕುರಿತ ವಿವರಗಳನ್ನು ಕೆಎಸ್ಟಿಡಿಸಿಯ ನೂತನ ಅಧ್ಯಕ್ಷ ಹಾಜಿ ಸತ್ತಾರ್ ಸೇಟ್ ಸುದ್ದಿಗಾರರಿಗೆ ನೀಡಿದರು.
ಕೋಕಾಕೋಲ, ಏರ್ಟೆಲ್ ಮುಂತಾದ ವಾಣಿಜ್ಯ ಸಂಸ್ಥೆಗಳ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯ ನೆನಪನ್ನು ಮಕ್ಕಳಲ್ಲಿ ಸ್ಮರಣೀಯಗೊಳಿಸಲು ಕೆಎಸ್ಟಿಡಿಸಿ ಉದ್ದೇಶಿಸಿದೆ. ಕಾರ್ಪೊರೇಟ್ ಸಂಸ್ಥೆಗಳು ಮೆದು ಪಾನಿಯ, ಮಿನರಲ್ ವಾಟರ್, ಟೀ ಷರ್ಟ್ ಹಾಗೂ ಟೋಪಿಗಳನ್ನು ಮಕ್ಕಳಿಗೆ ನೀಡಲಿವೆ. ಬೆಂಗಳೂರು ಟರ್ಫ್ ಕ್ಲಬ್ ಮಕ್ಕಳಿಗೆ ತಿಂಡಿಯ ವ್ಯವಸ್ಥೆ ಮಾಡಲಿದೆ ಎಂದು ಸೇಟ್ ತಿಳಿಸಿದರು.
ಶರ್ಮ ಟ್ರಾನ್ಸ್ಪೋರ್ಟ್ ಹಾಗೂ ಬ್ಲೂಲೈನ್ ಟ್ರಾನ್ಸ್ಪೋರ್ಟ್ ಕಂಪನಿಗಳು ಸಾರಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿವೆ. ಪ್ರವಾಸೋದ್ಯಮ ಸಚಿವ ಡಿ.ಬಿ.ಇನಾಂದಾರ್ ಮಕ್ಕಳ ಸಫಾರಿಗೆ ಹಸಿರು ನಿಶಾನೆ ತೋರುವರು. ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಉಡುಗೊರೆಗಳನ್ನು ವಿತರಿಸುವರು ಎಂದು ಸೇಟ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications