ಶತಮಾನೋತ್ಸವದ ಸ್ಮರಣೆ : ಕುವೆಂಪು ಹೆಸರಲ್ಲಿ ರಾಷ್ಟ್ರೀಯ ಪ್ರಶಸ್ತಿ
ಶತಮಾನೋತ್ಸವದ ಸ್ಮರಣೆ : ಕುವೆಂಪು ಹೆಸರಲ್ಲಿ ರಾಷ್ಟ್ರೀಯ ಪ್ರಶಸ್ತಿ
ಕುವೆಂಪು ಶತಮಾನೋತ್ಸವ ಆಚರಣೆಯ ರೂಪುರೇಷೆ ಚರ್ಚಿಸಿ ಬೆಂಗಳೂರಲ್ಲಿ ಸಭೆ
ಕುವೆಂಪು ಜನ್ಮ ಶತಮಾನೋತ್ಸವ ಆಚರಣೆಯ ರೂಪುರೇಷೆಯ ಬಗ್ಗೆ ತೀರ್ಮಾನಿಸಲು ಬುಧವಾರ (ನ. 12) ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು, ಸಾಹಿತಿಗಳಾದ ನಿಸಾರ್ ಅಹಮದ್, ಗಿರೀಶ್ ಕಾರ್ನಾಡ್, ಶಿವರುದ್ರಪ್ಪ, ದೇ.ಜ.ಗೌ ಮೊದಲಾದವರು ಭಾಗವಹಿಸಿದ್ದರು.
ಕುವೆಂಪು ಶತಮಾನೋತ್ಸವ ಆಚರಣೆಯಲ್ಲಿ ದೇಶ ಹಾಗೂ ರಾಜ್ಯದ ಪ್ರಮುಖ ನಗರ, ಪಟ್ಟಣ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ವಿಚಾರಗೋಷ್ಠಿ, ಸಂಕಿರಣ, ಕವಿಗೋಷ್ಠಿ ಮೊದಲಾದ ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
ಕುವೆಂಪು ವಿರಚಿತ ಶೂದ್ರ ತಪಸ್ವಿ, ಜಲಗಾರ, ಬೆರಳ್ಗೆ ಕೊರಳ್ ನಾಟಕಗಳನ್ನು ಪ್ರದರ್ಶಿಸುವುದು, ರಾಮಾಯಣ ದರ್ಶನಂ ಮಹಾಕಾವ್ಯದ ಮರುಮುದ್ರಣ ಹಾಗೂ ಹಂಪಿ ವಿಶ್ವವಿದ್ಯಾಲಯ ಸಿದ್ಧಪಡಿಸುತ್ತಿರುವ ಕುವೆಂಪು ಅವರ ಗದ್ಯ ಸಂಪುಟವನ್ನು ಹೆಚ್ಚಿನ ಆರ್ಥಿಕ ಸಹಾಯದೊಂದಿಗೆ ಶತಮಾನೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಕುಪ್ಪಳ್ಳಿ ಮತ್ತು ಹಿರೇಕೊಡಗಿ ಅರಣ್ಯ ಪ್ರದೇಶವನ್ನು ಜೀವ ವೈವಿಧ್ಯ ಸುರಕ್ಷಿತ ಅರಣ್ಯವನ್ನಾಗಿಸಲು ಈಗಾಗಲೇ ಉದ್ದೇಶಿಸಲಾಗಿದ್ದು, ಅದನ್ನು ಬೇಗ ಕಾರ್ಯಾನುಷ್ಠಾನಕ್ಕೆ ತರುವ ಕಳಕಳಿ ಸಭೆಯಲ್ಲಿ ವ್ಯಕ್ತವಾಯಿತು. ಕುವೆಂಪು ಹೆಸರಿನಲ್ಲಿ ಕೊಡಲು ಉದ್ದೇಶಿಸಲಾಗಿರುವ ರಾಷ್ಟ್ರೀಯ ಪ್ರಶಸ್ತಿಯನ್ನು ಮಾನ್ಯ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರುವ ಪ್ರಕ್ರಿಯೆಗೂ ಸಭೆಯಲ್ಲಿ ಚಾಲನೆ ದೊರೆಯಿತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications