ಆಂಧ್ರಕವಿ ಗದ್ದರ್ಗೆ ಚಿತ್ರದುರ್ಗ ಮಠದ ಬಸವಶ್ರೀ ಪುರಸ್ಕಾರ
ಆಂಧ್ರಕವಿ ಗದ್ದರ್ಗೆ ಚಿತ್ರದುರ್ಗ ಮಠದ ಬಸವಶ್ರೀ ಪುರಸ್ಕಾರ
ಶೋಷಿತರ ಪರ ನಿಂತ ಕವಿಗೆ ಸಂದ ಮನ್ನಣೆ
ಜನ ನಾಟ್ಯ ಮಂಡಳಿಯ ಧುರೀಣ ಹಾಗೂ ಅಖಿಲ ಭಾರತ ಕ್ರಾಂತಿಕಾರಿ ಸಂಸ್ಕೃತಿ ಒಕ್ಕೂಟ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗದ್ದರ್ ಅವರನ್ನು ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಚಿತ್ರದುರ್ಗ ಬೃಹನ್ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಫಲಕವನ್ನೊಳಗೊಂಡಿರುತ್ತದೆ. ಡಿಸೆಂಬರ್ 5ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾಜದಲ್ಲಿ ವಿಶಿಷ್ಠ ರೀತಿಯಲ್ಲಿ ಜನ ಜಾಗೃತಿಯನ್ನು ಮೂಡಿಸುತ್ತಿರುವ ಹಾಗೂ ಶೋಷಿತರ ಪರ ಧ್ವನಿ ಎತ್ತುತ್ತಿರುವ ಗದ್ದರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುರುಘರಾಜೇಂದ್ರ ಶರಣರು ಹೇಳಿದರು.
ಕವಿ ಗದ್ದರ್ ಶೋಷಣೆಯ ವಿರುದ್ಧ ಬಸವಣ್ಣನವರು ಮಾಡಿದ ಕ್ರಾಂತಿಯನ್ನು ಗೌರವಿಸುತ್ತಾರೆ. 12ನೇ ಶತಮಾನದ ಶರಣ ಪಡೆಯ ಮಾದರಿಯಲ್ಲಿಯೇ ಸೈನ್ಯವನ್ನು ಕಟ್ಟುವ ಕನಸು ಹೊಂದಿದ್ದು, ಈಗಾಗಲೇ ಜನನಾಟ್ಯ ಮಂಜಳಿ ಹಾಗೂ ಅಖಿಲ ಭಾರತ ಕ್ರಾಂತಿ ಸಂಸ್ಕೃತಿ ಒಕ್ಕೂಟ ಸಂಸ್ಥೆಗಳನ್ನು ಕ್ರಿಯಾಶೀಲಗೊಳಿಸಿದ್ದಾರೆ. ಬಂದೂಕಿನ ನಳಿಕೆಗೆ ಎದೆಯಾಡ್ಡಿ ಸಾಯುವ ನಕ್ಸಲೀಯರ ತ್ಯಾಗದ ಮುಂದೆ ತನ್ನ ಸಾಧನೆ ಎನೇನೂ ಅಲ್ಲ ಎನ್ನುವ ಗದ್ದರ್ ಆಂಧ್ರದ ಮಡಕ್ ಜಿಲ್ಲೆಯ ದಲಿತ ಕುಟುಂಬವೊಂದರಲ್ಲಿ ಹುಟ್ಟಿದವರು. ಕ್ರಾಂತಿಕಾರಿ ಕವಿಗಳ ಸಂಘಟನೆಯಾದ ಆರ್ಟ್ ಲವರ್ಸ್ ಅಸೋಸಿಯೇಷನ್ನ ಸದಸ್ಯರಾಗಿಜನ ಜಾಗೃತಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡವರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications