‘ಕಲಾಕೃತಿಗಳು ಕಂಪ್ಯೂಟರ್ಗೆ, ಶಾಸನಗಳ ಸಾಲುಗಳು ಕನ್ನಡಕ್ಕೆ’
‘ಕಲಾಕೃತಿಗಳು ಕಂಪ್ಯೂಟರ್ಗೆ, ಶಾಸನಗಳ ಸಾಲುಗಳು ಕನ್ನಡಕ್ಕೆ’
ಅಪರೂಪದ ಕಲಾಕೃತಿಗಳನ್ನು ಮನೆಮನೆ ತಲುಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯೋಜನೆ
ಚಿತ್ರಕಲಾ ಪರಿಷತ್ನಲ್ಲಿ ಶುಕ್ರವಾರ (ನ.11) ಕರ್ನಾಟಕ ನವೋದಯ ಕಾಲದ ಕಲಾವಿದರ ಪ್ರಾತಿನಿಧಿಕ ಕಲಾಕೃತಿಗಳ ಪ್ರದರ್ಶನದ ಉದ್ಘಾಟನಾ ಸಭೆಯಲ್ಲಿ ಸಚಿವೆ ರಾಣಿ ಸತೀಶ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ನವೋದಯ ಕಾಲದ ಕಲಾಕೃತಿಗಳನ್ನು ಸಂಗ್ರಹಿಸಿ ಮನೆಮನೆಗೆ ತಲುಪಿಸುವುದು ಈ ಯೋಜನೆಯ ಉದ್ದೇಶ. ಇದರಿಂದ ಹೊಸ ಪೀಳಿಗೆಯ ಕಲಾವಿದರು, ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ ಎಂದರು.
ಶಿಲಾಶಾಸನದ ತಿರುಳು ಕನ್ನಡಕ್ಕೆ : ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಸಾವಿರಾರು ಶಿಲಾಶಾಸನಗಳು ನಮ್ಮಲ್ಲಿ ಇವೆ. ಅವುಗಳಲ್ಲಿ ಏನಿದೆ ಎಂಬುದು ಜನ ಸಾಮಾನ್ಯರಿಗೆ ತಲುಪುತ್ತಿಲ್ಲ. ಹೀಗಾಗಿ ಸಂಸ್ಕೃತ ಮತ್ತು ಹಳೆಗನ್ನಡದಲ್ಲಿರುವ ಶಿಲಾ ಶಾಸನಗಳ ಸಾಲುಗಳನ್ನು ಕನ್ನಡಕ್ಕೆ ಭಾಷಾಂತರಿಸಿ, ಅವುಗಳಿರುವ ಜಾಗದ ಪಕ್ಕ ಫಲಕಗಳ ರೂಪದಲ್ಲಿ ಅಳವಡಿಸಲು ಉದ್ದೇಶಿಸಿದ್ದೇವೆ. ಈ ಯೋಜನೆಗೆ ಹಣಕಾಸಿನ ನೆರವು ಕೊಡುವುದಾಗಿ ಕೇಂದ್ರ ಪ್ರವಾಸೋದ್ಯಮ ಸಚಿವ ಜಗಮೋಹನ್ ಭರವಸೆ ಕೊಟ್ಟಿದ್ದಾರೆ ಎಂದು ರಾಣಿ ಸತೀಶ್ ಹೇಳಿದರು.
ಹಂಪಿ ವಿಶ್ವ ಪರಂಪರೆ ಕೇಂದ್ರವಾಗಿ ಎಂದೆಂದಿಗೂ ಉಳಿಯಬೇಕು ಎಂದು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ತಮ್ಮ ಬಯಕೆ ತೋಡಿಕೊಂಡರು. ವಿಧಾನ ಪರಿಷತ್ ಸಭಾಪತಿ ಬಿ.ಎಲ್.ಶಂಕರ್, ಸಾಹಿತಿ ಹಾಗೂ ವಿಮರ್ಶಕ ಪ್ರೊ.ಎಂ.ಎಚ್.ಕೃಷ್ಣಯ್ಯ, ಕರ್ನಾಟಕ ಚಿತ್ರಕಲಾ ಪರಿಷತ್ ಕಾರ್ಯದರ್ಶಿ ಡಿ.ಕೆ.ಚೌಟ ಸಮಾರಂಭದಲ್ಲಿ ಇದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications