ಮಂಡ್ಯ ರೈತರ ಮೂಗಿಗೆ ತುಪ್ಪ, ಮೆಟ್ರೋ ಮೇಲೆ ಗೌಡರ ಕೋಪ
ಮಂಡ್ಯ ರೈತರ ಮೂಗಿಗೆ ತುಪ್ಪ, ಮೆಟ್ರೋ ಮೇಲೆ ಗೌಡರ ಕೋಪ
ಬೆಳೆಹಾನಿಯ ತೊಂದರೆ ಅನುಭವಿಸಿದ ಮಂಡ್ಯ ಜಿಲ್ಲೆಯ ರೈತರಿಗೆ 22 ಕೋಟಿ ರು. ಪರಿಹಾರ
ಮಾಜಿ ಸಂಸದ ಜಿ.ಮಾದೇಗೌಡ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಮತ್ತಿತರ ರೈತ ಮುಖಂಡರು ಹಾಗೂ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಡುವೆ ಸೋಮವಾರ (ನ.17) ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಫಲಶೃತಿಯನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಪ್ರೊ.ಬಿ.ಕೆ.ಚಂದ್ರಶೇಖರ್ ಸುದ್ದಿಗಾರರಿಗೆ ತಿಳಿಸಿದರು. ಇದೇ ರೀತಿಯ ತೊಂದರೆ ಅನುಭವಿಸಿರುವ ಇತರೆ ಜಿಲ್ಲೆಗಳ ರೈತರಿಗೂ ಪರಿಹಾರ ಕೊಡುವಿರಾ ಎಂಬ ಪ್ರಶ್ನೆಗೆ, ಈ ಬಗ್ಗೆ ಸರ್ಕಾರ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಬಿ.ಕೆ.ಸಿ. ಉತ್ತರಿಸಿದರು.
ಪ್ರಮುಖ ಬೆಳೆ ಕಬ್ಬು ಸೇರಿದಂತೆ ಒಟ್ಟು ಕೃಷಿ ಮೇಲೆ ಮಂಡ್ಯ ಜಿಲ್ಲೆಯ ರೈತರು 58 ಕೋಟಿ ರುಪಾಯಿ ಸುರಿದು, ನೀರಿನ ಸಮಸ್ಯೆಯ ಕಾರಣ ಕೈಸುಟ್ಟುಕೊಂಡಿದ್ದಾರೆ ಎಂದು ಕಂದಾಯ ಆಯುಕ್ತ ವಿನಯ್ ಕುಮಾರ್ ನೇತೃತ್ವದ ಅಧಿಕಾರಿಗಳ ಸಮಿತಿ ವರದಿ ನೀಡಿತ್ತು. ಇದನ್ನು ಪರಿಗಣಿಸಿ, ಮಂಡ್ಯ ರೈತರ ಕಣ್ಣೀರನ್ನು ಒರೆಸಲು ತೀರ್ಮಾನಿಸಲಾಯಿತು ಎಂದರು.
ಮೆಟ್ರೋ ವಿರುದ್ಧ ದೇವೇಗೌಡರ ಕಿಡಿ
ಜರ್ಮನ್ ಮೂಲದ ವ್ಯಾಪಾರಿ ಮಳಿಗೆ ಮೆಟ್ರೋಗಳಲ್ಲಿ ಕೃಷಿ ಉತ್ಪನ್ನಗಳನ್ನು ಮಾರಲು ಅವಕಾಶ ಕಲ್ಪಿಸುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಸರ್ಕಾರದ ನಿರ್ಧಾರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಖಂಡಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜೊತೆ ದೇವೇಗೌಡರು ಮಾತಾಡುತ್ತಿದ್ದರು. ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು, 124 ಕೃಷಿ ಉತ್ಪನ್ನಗಳನ್ನು ಮಾರಲು ವಿದೇಶೀ ಕಂಪನಿಗೆ ಅನುಮತಿ ಕೊಟ್ಟರೆ ನಮ್ಮ ರೈತರ ಹಿತಾಸಕ್ತಿಗೆ ಧಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ, ಎಪಿಎಂಸಿ ಯಾರ್ಡ್ಗಳಲ್ಲಿ ಕೆಲಸ ಮಾಡುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ಕಾರ್ಮಿಕರು ಬೀದಿಗೆ ಬರಬೇಕಾಗುತ್ತದೆ. ಸರ್ಕಾರ ಒಂದು ವೇಳೆ ಕಾಯ್ದೆಗೆ ತಿದ್ದುಪಡಿ ತಂದರೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇನೆ ಎಂದು ಗೌಡರು ಧಮಕಿ ಹಾಕಿದರು.
ವಿದೇಶೀ ನೇರ ಬಂಡವಾಳ (ಎಫ್ಡಿಐ) ಹೂಡಲು ಕೇಂದ್ರ ಸರ್ಕಾರ ಸಮ್ಮತಿಸುವುದಿಲ್ಲ. ಹಾಗಿದ್ದೂ ಮೆಟ್ರೋಗೆ ಅದು ಅರ್ಜಿ ಹಾಕುವ ಒಂದು ದಿನ ಮೊದಲೇ ರಾಜ್ಯ ಸರ್ಕಾರ ಅನುಮತಿ ಕೊಟ್ಟಿರುವುದು ಅನುಮಾನಾಸ್ಪದ ಸಂಗತಿ. ಸರ್ಕಾರ ಹೀಗೆ ಮಾಡುತ್ತಿರುವುದು ಔಚಿತ್ಯವೇನು ಎಂದು ಗೌಡರು ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಎರಡು ಮಳಿಗೆ ತೆರೆದಿರುವ ಮೆಟ್ರೋ 176 ಕೋಟಿ ರುಪಾಯಿ ಬಂಡವಾಳ ವಿನಿಯೋಗಿಸಿದೆ. ನಗರದ ಸಗಟು ವ್ಯಾಪಾರಿ ವರ್ಗ ಈ ಮಳಿಗೆಯ ವಿರುದ್ಧ ಎತ್ತಿದ್ದ ದನಿ ಕೂಡ ಈಗ ಸಾಕಷ್ಟು ತಗ್ಗಿದ್ದು, ಮೆಟ್ರೋ ವ್ಯಾಪಾರ ಸಾಂಗವಾಗಿ ಸಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications