ಇಫ್ತಾರ್ ಕೂಟ ರದ್ದು , ಕಲಾಂ ಮೇಲ್ಪಂಕ್ತಿ ಅನುಸರಿಸಿದ ಎಸ್ಸೆಂ.ಕೃಷ್ಣ
ಬೆಂಗಳೂರು : ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಮೇಲ್ಪಂಕ್ತಿಯನ್ನು ಅನುಸರಿಸಲು ಮುಂದಾಗಿರುವ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಈ ಬಾರಿಯ ಇಫ್ತಾರ್ ಕೂಟವನ್ನು ರದ್ದುಪಡಿಸಿದ್ದಾರೆ.
ಸಾಂಪ್ರದಾಯಿಕ ಇಫ್ತಾರ್ ಕೂಟವನ್ನು ರದ್ದು ಮಾಡಲು ನಿರ್ಧರಿಸುವ ಮುಖ್ಯಮಂತ್ರಿ ಕೃಷ್ಣ - ಔತಣ ಕೂಟಕ್ಕೆ ವೆಚ್ಚವಾಗಲಿದ್ದ ಐದು ಲಕ್ಷ ರುಪಾಯಿಗಳನ್ನು ಅನಾಥಾಶ್ರಮಗಳಿಗೆ ನೀಡುವರು. ಮೈಸೂರಿನ ಎರಡು, ಬೆಂಗಳೂರು ಹಾಗೂ ಗುಲ್ಬರ್ಗಾದ ತಲಾ ಒಂದು ಅನಾಥಾಶ್ರಮಗಳು ಇಫ್ತಾರ್ ಕೂಟ ರದ್ದಾದ ಕಾರಣದಿಂದ ಮಿಗುವ ಹಣದ ಫಲಾನುಭವಿಗಳು.
ಕಳೆದ ವಾರವಷ್ಟೇ, ಈ ಬಾರಿಯ ಇಫ್ತಾರ್ ಔತಣ ಕೂಟವನ್ನು ರದ್ದು ಮಾಡಿರುವುದಾಗಿ ರಾಷ್ಟ್ರಪತಿ ಕಲಾಂ ಪ್ರಕಟಿಸಿದ್ದರು. ಈ ಹಣವನ್ನು ಅನಾಥಾಶ್ರಮಗಳಿಗೆ ನೀಡುವುದಾಗಿಯೂ ಕಲಾಂ ಪ್ರಕಟಿಸಿದ್ದರು. ರಾಷ್ಟ್ರಪತಿಗಳ ಆದರ್ಶವನ್ನು ಪಾಲಿಸಲು ಮುಖ್ಯಮಂತ್ರಿ ಕೃಷ್ಣ ಮುಂದಾಗಿದ್ದಾರೆ ಎಂದು ವಿಧಾನಸೌಧದ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ , ರಾಜ್ಯದಲ್ಲಿನ ಬರದ ಕಾರಣ ಮುಖ್ಯಮಂತ್ರಿ ಕೃಷ್ಣ ತಮ್ಮ ವಿದೇಶಿ ಪ್ರವಾಸಗಳನ್ನು ರದ್ದುಪಡಿಸಿದ್ದರು. ಅದೇರೀತಿ, ಎರಡು ವರ್ಷಗಳ ಕಾಲ ಅದ್ದೂರಿ ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರ ತಡೆ ಹಾಕಿತ್ತು .(ಪಿಟಿಐ)
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications