ಸಾಹಿತ್ಯ ಪರಿಷತ್ತಿಗೆ ‘ಅಮ್ಮನ ಸೆಳೆತ’ ಇಲ್ಲ - ಬರಗೂರು ವಿಷಾದ
ಸಾಹಿತ್ಯ ಪರಿಷತ್ತಿಗೆ ‘ಅಮ್ಮನ ಸೆಳೆತ’ ಇಲ್ಲ - ಬರಗೂರು ವಿಷಾದ
ಕಮಲಾ ಹಂಪನಾ ಅವರಿಗೆ ಅಭಿನಂದನೆ- ಸನ್ಮಾನ
ಅಮ್ಮನಂತೆ ಮಕ್ಕಳನ್ನು ಸೆಳೆಯುವ ಸಾಮರ್ಥ್ಯ ಪರಿಷತ್ತಿಗೆ ಇಲ್ಲ . ಪರಿಷತ್ತು ನಡೆಸುವ ಸಾಹಿತ್ಯ ಸಮ್ಮೇಳಗಳು ದುಬಾರಿ ಸಮ್ಮೇಳನಗಳಾಗಿ ಪರಿಣಮಿಸಿವೆಯೇ ಹೊರತು, ಅರ್ಥಪೂರ್ಣ ಚರ್ಚೆಯ ಚಾವಡಿಗಳಾಗಿಲ್ಲ . ಸಮ್ಮೇಳನಾಧ್ಯಕ್ಷರು ಏನು ಮಾತನಾಡಬೇಕು ಎನ್ನುವ ಆದೇಶ-ಒತ್ತಡ ಹೊರಗಿನಿಂದ ಬರುವ ಪರಿಸ್ಥಿತಿಯಿದೆ ಎಂದು ಬರಗೂರು ವಿಷಾದಿಸಿದರು. 71ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಮಲಾ ಹಂಪನಾ ಅವರ ಅಭಿನಂದನಾ ಸಮಾರಂಭದಲ್ಲಿ ಬರಗೂರು ಮಾತನಾಡುತ್ತಿದ್ದರು (ನ.18). ಬೆಂಗಳೂರು ನಗರ ಜಿಲ್ಲಾ ಕಸಾಪ ಈ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿತ್ತು .
ಸ್ತ್ರೀ ಎನ್ನುವ ಕಾರಣಕ್ಕಾಗಿ ಕಮಲಾ ಹಂಪನಾ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನುವ ಟೀಕೆ ಸರಿಯಲ್ಲ . ಕಮಲಾ ಅವರನ್ನು ಅವರ ಅರ್ಹತೆಯನ್ನು ಪರಿಗಣಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದ ಬರಗೂರು- ಅಧ್ಯಕ್ಷರ ಆಯ್ಕೆಯ ಮುನ್ನ ಚರ್ಚೆಗಳು ನಡೆಯಲಿ. ಆದರೆ, ಆಯ್ಕೆಯ ನಂತರ ವಾದ ವಿವಾದಗಳನ್ನು ನಿಲ್ಲಿಸಬೇಕು ಎಂದರು.
ಕಾಲಿಗೆ ಬೀಳುವ ಮತ್ತು ಕಾಲೆಳೆಯುವ ಪ್ರವೃತ್ತಿ ರಾಜಕಾರಣದಲ್ಲಿ ಮಾತ್ರವಲ್ಲದೆ ಸಾಂಸ್ಕೃತಿಕ ಕ್ಷೇತ್ರದಲ್ಲೂ ವ್ಯಾಪಕವಾಗಿದೆ. ಸಾಹಿತಿಗಳಲ್ಲಿ ಪರಸ್ಪರ ಕಾಲೆಳೆಯುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಬರಗೂರು ಟೀಕಿಸಿದರು.
ಅಭಿನಂದನೆ-ಸನ್ಮಾನಕ್ಕೆ ಧನ್ಯವಾದ ಹೇಳಿದ ಕಮಲಾ ಹಂಪನಾ, ಸಾಹಿತ್ಯದಲ್ಲಿ ಲಿಂಗ ತಾರತಮ್ಯ ಸಲ್ಲದೆಂದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಲ್ಲೇಪುರಂ ಜಿ.ವೆಂಕಟೇಶ್, ಲೇಖಕಿ ಡಾ.ಎಸ್.ವಿ.ಪ್ರಭಾವತಿ, ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಕೋ.ವೆಂ.ರಾಮಕೃಷ್ಣೇಗೌಡ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications