ನಕಲಿ ಸ್ಟಾಂಪ್ ಪೇಪರ್ ತನಿಖೆ ಸಿಬಿಐಗೆ ವಹಿಸಲು ಕೃಷ್ಣ ನಕಾರ
ನಕಲಿ ಸ್ಟಾಂಪ್ ಪೇಪರ್ ತನಿಖೆ ಸಿಬಿಐಗೆ ವಹಿಸಲು ಕೃಷ್ಣ ನಕಾರ
ಬಂಧನಕ್ಕೆ ಮುಂಚೆಯೇ ತೆಲಗಿಗೆ ಎಚ್ಐವಿ- ತನಿಖಾಧಿಕಾರಿ ಸ್ಪಷ್ಟನೆ
ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ . ಸ್ಟಾಂಪ್ ಪೇಪರ್ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವೂ ಇಲ್ಲ ಎಂದು ಗುರುವಾರ (ನ.20) ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಕೃಷ್ಣ ಅನೌಪಚಾರಿಕವಾಗಿ ಮಾತನಾಡುತ್ತಿದ್ದರು.
ಸ್ಟಾಂಪ್ ಪೇಪರ್ ಕುರಿತ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಸಿಬಿಐನಿಂದ ಮತ್ತೊಂದು ತನಿಖೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎನ್ನುವ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕೃಷ್ಣ ಸಮರ್ಥಿಸಿದರು. ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಕೃಷ್ಣ - ತನಿಖೆಯನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪುನರುಚ್ಛರಿಸಿದರು.
ಹಗರಣದಲ್ಲಿ ಹೆಸರು ಪ್ರಸ್ತಾಪವಾಗುತ್ತಿರುವ ಸಚಿವ ರೋಷನ್ ಬೇಗ್ ಅವರು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುವ ಕುರಿತ ವರದಿಗಳನ್ನು ಕೇವಲ ವದಂತಿಗಳು ಎಂದು ಕೃಷ್ಣ ಬಣ್ಣಿಸಿದರು.
ಸ್ಟಾಂಪ್ ಹಗರಣದ ತನಿಖೆಯ ಕುರಿತು ಪ್ರತ್ಯೇಕ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ನ್ಯಾಯಾಲಯವನ್ನು ಕರ್ನಾಟಕ ಹೈಕೋರ್ಟ್ ನೇಮಿಸುವ ನಿರೀಕ್ಷೆಯಿದೆ.
ತೆಲಗಿಗೆ ಬಂಧನಕ್ಕೆ ಮುಂಚೆಯೇ ಏಡ್ಸ್ : ಸ್ಟಾಂಪ್ ಪೇಪರ್ ಹರಗರದ ಪ್ರಮುಖ ಆರೋಪಿ ಕರೀಂಲಾಲ ತೆಲಗಿಗೆ ಪೊಲೀಸರು ಎಚ್ಐವಿ ವೈರಾಣುಗಳ ಚುಚ್ಚುಮದ್ದು ನೀಡಿದ್ದಾರೆ ಎನ್ನುವ ವರದಿಗಳನ್ನು ತನಿಖಾಧಿಕಾರಿ ಆರ್.ಶ್ರೀಕುಮಾರ್ ತಳ್ಳಿಹಾಕಿದ್ದಾರೆ. ಬಂಧನಕ್ಕೆ ಮುಂಚೆಯೇ ತೆಲಗಿಗೆ ಎಚ್ಐವಿ ಸೋಂಕು ತಗುಲಿತ್ತು ಎಂದು ಶ್ರೀಕುಮಾರ್ ಸ್ಪಷ್ಟನೆ ನೀಡಿದ್ದಾರೆ.
(ಪಿಟಿಐ)
ಪೂರಕ ಓದಿಗೆ
ನಕಲಿ ಛಾಪಾ ಕಾಗದಗಳ ಸರದಾರ ತೆಲಗಿಗೆ ಜೈಲಲ್ಲಿ ಏಡ್ಸ್ !
ಮುಖಪುಟ / ಕೃಷ್ಣಗಾರುಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications