ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಷ್ಟ್ರು ಕೆಲಸದಿಂದ ಬರಗೂರು ರಾಮಚಂದ್ರಪ್ಪ ಸ್ವಯಂನಿವೃತ್ತಿ

By Staff
|
Google Oneindia Kannada News

ಮೇಷ್ಟ್ರು ಕೆಲಸದಿಂದ ಬರಗೂರು ರಾಮಚಂದ್ರಪ್ಪ ಸ್ವಯಂನಿವೃತ್ತಿ
ಬರವಣಿಗೆಯಲ್ಲಿ ಪೂರ್ಣಾವಧಿ ತೊಡಗಿಸಿಕೊಳ್ಳಲು ನಿರ್ಧಾರ

ಬೆಂಗಳೂರು : ಲೇಖಕ ಬರಗೂರು ರಾಮಚಂದ್ರಪ್ಪ ಅವರು ಪ್ರಾಧ್ಯಾಪಕ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದು , ಇನ್ನುಮುಂದೆ ಬರವಣಿಗೆಯಲ್ಲಿ ಪೂರ್ಣಾವಧಿ ತೊಡಗಿಸಿಕೊಳ್ಳಲು ಉದ್ದೇಶಿಸಿದ್ದಾರೆ.

ಇನ್ನೂ ನಾಲ್ಕು ವರ್ಷಗಳ ಸೇವಾವಧಿಯನ್ನು ಹೊಂದಿರುವ ಬರಗೂರು ರಾಮಚಂದ್ರಪ್ಪ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬರವಣಿಗೆಯಲ್ಲಿ ಪೂರ್ಣಾವಧಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸ್ವಯಂ ನಿವೃತ್ತಿ ಪಡೆಯುತ್ತಿರುವುದಾಗಿ ಬರಗೂರು ತಿಳಿಸಿದ್ದಾರೆ. ನಿವೃತ್ತಿಯ ನಂತರ ರಾಜಕೀಯ ಪ್ರವೇಶಿಸುವ ಉದ್ದೇಶ ತಮಗಿಲ್ಲ ಎಂದೂ ಬರಗೂರು ಹೇಳಿದ್ದಾರೆ.

ಬೀಳ್ಕೊಡುಗೆ : ಬೆಂಗಳೂರು ವಿಶ್ವವಿದ್ಯಾಲಯದ ಸ್ನೇಹಬಳಗ ನ.21ರ ಶುಕ್ರವಾರ ಬರಗೂರು ರಾಮಚಂದ್ರಪ್ಪ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಏರ್ಪಡಿಸಿದೆ. ಸಚಿವ ಎಚ್‌.ವಿಶ್ವನಾಥ್‌, ವಿಮರ್ಶಕ ಡಾ.ಬಸವರಾಜ ಕಲ್ಗುಡಿ ಹಾಗೂ ಬೆಂಗಳೂರು ವಿವಿ ಕುಲಪತಿ ಪ್ರೊ.ಎಂ.ಎಸ್‌.ತಿಮ್ಮಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸುವರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X