ದತ್ತಪೀಠ ಕಿರಿಕ್ಕು: ಕಾರ್ನಾಡರು ಕ್ಷಮೆ ಕೇಳಲಿ-ಭಜರಂಗ ದಳ
ದತ್ತಪೀಠ ಕಿರಿಕ್ಕು: ಕಾರ್ನಾಡರು ಕ್ಷಮೆ ಕೇಳಲಿ-ಭಜರಂಗ ದಳ
ಕಾರ್ನಾಡ್ ಹಾಗೂ ಕಾಂಗ್ರೆಸ್ ಮೇಲೆ ವಿಎಚ್ಪಿ, ಭಜರಂಗ ದಳ ವಾಗ್ದಾಳಿ
ಇತ್ತೀಚೆಗೆ ಕಾರ್ನಾಡ್ ಸೇರಿದಂತೆ ಸಾಹಿತಿಗಳು ಮತ್ತು ಬರಹಗಾರರ ದಂಡು ದತ್ತಪೀಠಕ್ಕೆ ಭೇಟಿ ಕೊಟ್ಟು, ಹಿಂದು ಸಂಘಟನೆಗಳು ಹಿಂದೂ- ಮುಸ್ಲಿಂ ಸಂಘರ್ಷದ ವೇದಿಕೆ ನಿರ್ಮಿಸುತ್ತಿವೆ ಎಂದು ಹೇಳಿದ್ದರು. ಈ ಟೀಕೆಯನ್ನು ವಿರೋಧಿಸಿರುವ ಭಜರಂಗ ದ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಬಹಿರಂಗ ಕ್ಷಮೆಗೆ ಒತ್ತಾಯಿಸಿದ್ದಾರೆ.
ಭಜರಂಗದಳದ ಹುಬ್ಬಳ್ಳಿ ನಗರ ಸಂಚಾಲಕ ಅಶೋಕ್ ಅಣ್ವೇಕರ್ ಸುದ್ದಿಗಾರರ ಮುಂದೆ ತಮ್ಮ ಆಗ್ರಹವನ್ನು ಇಟ್ಟರು. ಗೋದ್ರಾದಲ್ಲಿ ಹಿಂದೂ ಪ್ರಯಾಣಿಕರನ್ನು ಅಮಾನುಷವಾಗಿ ಕೊಂದರು. ಗುಜರಾತ್ನ ನಾರಾಯಣ ಮಂದಿರಕ್ಕೆ ಬಾಂಬ್ ಹಾಕಿದರು. ಕಾಶ್ಮೀರದಲ್ಲಿ ನಿತ್ಯವೂ ಮಾರಣಹೋಮ ನಡೆಯುತ್ತಲೇ ಇದೆ. ಇವೆಲ್ಲವನ್ನು ಕಂಡೂ ಕಾರ್ನಾಡರಂಥವರು ಹಿಂದೂಗಳನ್ನು ಅನಗತ್ಯವಾಗಿ ಟೀಕಿಸುತ್ತಿದ್ದಾರೆ. ಅವರು ಕಾಂಗ್ರೆಸ್ಸಿನ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಸರ್ಕಾರ ಕೂಡ ಅಲ್ಪಸಂಖ್ಯಾತರನ್ನು ಮುದ್ದು ಮಾಡುತ್ತಾ, ಹಿಂದೂಗಳಿಗೆ ಅನ್ಯಾಯ ಎಸಗುತ್ತಿದೆ. ಗಿರೀಶ್ ಕಾರ್ನಾಡಕ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಅಣ್ವೇಕರ್ ಹೇಳಿದರು.
ಬಾಬಾ ಬುಡನ್ಗಿರಿಯಲ್ಲಿ ದತ್ತಪೀಠ ಇರುವುದಕ್ಕೆ ನಮ್ಮಲ್ಲಿ ಸಾಕಷ್ಟು ಸಾಕ್ಷ್ಯಗಳಿವೆ ಎಂದ ಅಣ್ವೇಕರ್, ಇವನ್ನು ಪರಿಗಣಿಸಿ ಸರ್ಕಾರ ದತ್ತ ಜಯಂತಿಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ದತ್ತಜಯಂತಿ ನಿಷೇಧಕ್ಕೆ ಕಾರ್ನಾಡ್ ಮತ್ತಿತರ ಸಾಹಿತಿಗಳ ಆಗ್ರಹ
ದತ್ತಪೀಠ ಚರ್ಚೆಗೆ ಬನ್ನಿ -ಕಾರ್ನಾಡ್ಗೆ ಭಜರಂಗದಳದ ಆಹ್ವಾನ
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications