‘ಮೂಡಬಿದಿರೆ ಸಮ್ಮೇಳನಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ’
‘ಮೂಡಬಿದಿರೆ ಸಮ್ಮೇಳನಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ’
ಜೋರು ಸಿದ್ಧತೆಗಳ ನಡುವೆಯೂ ಪುನರೂರು ಬೇಜಾರು
ಪ್ರತಿ ಸಮ್ಮೇಳನಕ್ಕೆ ಸರ್ಕಾರ 15 ಲಕ್ಷ ರುಪಾಯಿ ಕೊಡುತ್ತಿತ್ತು. ಆದರೆ ಈ ವರ್ಷ ಅದನ್ನು 12 ಲಕ್ಷಕ್ಕೆ ಇಳಿಸಿದೆ. ಸಾಹಿತ್ಯ ಪರಿಷತ್ಗೆ 20 ಲಕ್ಷ ರುಪಾಯಿ ಪರಿಹಾರ ಕೊಡುವುದಾಗಿಯೂ ಸರ್ಕಾರ ಹೇಳಿದೆ. ಆದರೆ ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಸೋಮವಾರ (ನ.24) ಪುನರೂರು ಹೇಳಿದರು.
ಸಮ್ಮೇಳನಕ್ಕೆ ಸುಮಾರು 1 ಕೋಟಿ ರುಪಾಯಿ ಖರ್ಚಾಗುವ ನಿರೀಕ್ಷೆಯಿದ್ದು, ಸ್ಥಳೀಯರಿಂದಲೇ ಸಂಪನ್ಮೂಲ ಸಂಗ್ರಹಿಸುತ್ತಿದ್ದೇವೆ. ವೇದಿಕೆಯ ಶೇ. 70ರಷ್ಟು ನಿರ್ಮಾಣ ಮುಗಿದಿದೆ. 20 ಸಾವಿರ ಜನ ಕೂರುವಂತೆ ಸಭಾಂಗಣ ನಿರ್ಮಿಸಲಾಗುತ್ತಿದೆ. 400 ಪುಸ್ತಕ ಮಳಿಗೆಗಳನ್ನು ತೆರೆಯಲು ವ್ಯವಸ್ಥೆ ಒದಗಿಸಲಾಗುತ್ತಿದೆ ಎಂದು ಪುನರೂರು ಸಮ್ಮೇಳನದ ಸಿದ್ಧತೆಯ ವಿವರಗಳನ್ನು ಕೊಟ್ಟರು.
ಸಮ್ಮೇಳನ ಉದ್ಘಾಟಿಸಲು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕರೆಯಲಾಗಿದೆ. ಆದರೆ ಈವರೆಗೂ ಅವರು ಒಪ್ಪಿಗೆ ಸೂಚಿಸಿಲ್ಲ. ಮತ್ತೆ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಸಮ್ಮೇಳನವನ್ನು ಮುಂದಕ್ಕೆ ಹಾಕುವುದಿಲ್ಲ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications