ಛಾಪಾ ಪಾಪ : ಬಿಜೆಪಿಗೆ ಸುಶಿಲ್ ಕುಮಾರ್ ಶಿಂಧೆ ತಿರುಬಾಣ
ಛಾಪಾ ಪಾಪ : ಬಿಜೆಪಿಗೆ ಸುಶಿಲ್ ಕುಮಾರ್ ಶಿಂಧೆ ತಿರುಬಾಣ
‘ನಮ್ಮ ಸರ್ಕಾರದ ಯಾವ ಮಂತ್ರಿಯೂ ಹಗರಣದಲ್ಲಿ ಭಾಗಿಯಾಗಿಲ್ಲ’
ಶುಕ್ರವಾರ (ನ.28) ಸುದ್ದಿಗಾರರ ಜೊತೆ ಮಾತಾಡುತ್ತಿದ್ದ ಶಿಂಧೆ, ನಮ್ಮ ಕಾಂಗ್ರೆಸ್ ಸರ್ಕಾರದ ಯಾವೊಬ್ಬ ಮಂತ್ರಿ ಕೂಡ ಈ ಹಗರಣದಲ್ಲಿ ಭಾಗಿಯಾಗಿಲ್ಲ. ಈ ಹಗರಣ ಶುರುವಾಗಿರುವುದು ಈಗಲ್ಲ, ಒಂಬತ್ತು ಹತ್ತು ವರ್ಷಗಳ ಹಿಂದೆ. ಆಗ ಶಿವಸೇನೆ- ಬಿಜೆಪಿ ಸರ್ಕಾರ ಮಹಾರಾಷ್ಟ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿತ್ತು. ವರ್ಷಗಳಿಂದ ಸುಮ್ಮನಿದ್ದ ಕೇಂದ್ರ ಸರ್ಕಾರ ಕಳೆದ ಎರಡು ತಿಂಗಳಿಂದ ಮಾತ್ರ ಹಗರಣದ ಬಗ್ಗೆ ಆಸಕ್ತಿ ವಹಿಸುತ್ತಿರುವುದು ಅನುಮಾನಾಸ್ಪದವಾಗಿದೆ ಎಂದರು.
ಎರಡು ತಿಂಗಳ ಹಿಂದೆ ನಕಲಿ ಛಾಪಾ ಕಾಗದ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಸಾಧ್ಯವಿಲ್ಲ. ಅದು ದೊಡ್ಡ ಹಗರಣವಾದ್ದರಿಂದ ಸಿಬಿಐಗೆ ಹೊರೆಯಾಗಲಿದೆ ಎಂದು ಆಗಿನ ಹೆಚ್ಚುವರಿ ಸಾಲಿಸಿಟರ್ ಜನರಲ್ ಹೇಳಿದ್ದರು. ಈಗ ಇದ್ದಕ್ಕಿದ್ದಂತೆ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿರುವ ಔಚಿತ್ಯವೇನೋ ತಿಳಿಯುತ್ತಿಲ್ಲ. ಸಿಬಿಐ ತನಿಖೆ ನಡೆದರೂ ಕೂಡ ನಮ್ಮ ಅಭ್ಯಂತರವಿಲ್ಲ. ಯಾಕೆಂದರೆ, ಮಹಾರಾಷ್ಟ್ರದ ಯಾವ ಮಂತ್ರಿಯೂ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಶಿಂಧೆ ಹೇಳಿದರು.
ಹಗರಣದ ತನಿಖೆಯನ್ನು ಸದ್ಯಕ್ಕೆ ಸಿಬಿಐಗೆ ಒಪ್ಪಿಸದೆ, ವಿಶೇಷ ತನಿಖಾ ತಂಡ ದ ತನಿಖೆಗೆ ಮುಂಬಯಿ ಹೈಕೋರ್ಟ್ ಗುರುವಾರ ತೃಪ್ತಿ ವ್ಯಕ್ತಪಡಿಸಿತ್ತು. ಇದೇ ದಿನ, ಹಗರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಪೊಲೀಸ್ ಅಧಿಕಾರಿ ಆರ್.ಎಸ್.ಶರ್ಮ- ಪ್ರಕರಣದಲ್ಲಿ ಕೆಲವು ಮಂತ್ರಿ ಮಹೋದಯರೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಆದರೆ ಶಿಂಧೆ ಬಿಜೆಪಿಗೇ ತಿರುಗೇಟು ನೀಡಲು ನಿಂತಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications