ಕರ್ನಾಟಕ ರೈತ ಸಂಘದ ಭಾಗ-ಪ್ರಗತಿಪರ ಜನತಾ ದಳ ವಿಲೀನ
ಬೆಂಗಳೂರು : ಜನತಾ ಪರಿವಾರದ ವಿಲೀನ ಪ್ರಕ್ರಿಯೆ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಅಖಿಲ ಭಾರತ ಪ್ರಗತಿಪರ ಜನತಾ ದಳ (ಎಐಪಿಜೆಡಿ) ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್) ದ ಒಂದು ಭಾಗದೊಡನೆ ಸೇರಿ ಮುಂದಿನ ಲೋಕಸಭಾ ಚುನಾವಣಾ ಕಣಕ್ಕೆ ಇಳಿಯಲಿದೆ. ಹೀಗೆ ವಿಲೀನವಾಗಲಿರುವ ಪಕ್ಷವೇ ಕರ್ನಾಟಕ ಪ್ರಜಾಸತ್ತಾತ್ಮಕ ಒಕ್ಕೂಟ.
ಎಐಪಿಜೆಡಿ ಕರ್ನಾಟಕ ಘಟಕದ ಅಧ್ಯಕ್ಷ ಕೆ.ಎನ್.ನಾಗೇಗೌಡ ಮತ್ತು ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಬುಧವಾರ (ಡಿ. 24) ಈ ವಿಷಯ ತಿಳಿಸಿದರು. ಒಕ್ಕೂಟ ನಡೆಯಬೇಕಾದ ಹಾದಿಯನ್ನು ಇನ್ನೂ ತೀರ್ಮಾನಿಸಬೇಕಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಹೊರತುಪಡಿಸಿ, ಮಿಕ್ಕ ಪಕ್ಷಗಳ ಸಮಾನ ಮನಸ್ಕರು ಒಕ್ಕೂಟಕ್ಕೆ ಸೇರುವುದಾದರೆ ಸದಾ ಸ್ವಾಗತ ಎಂದು ನಾಗೇಗೌಡ ಹಾಗೂ ಪುಟ್ಟಣ್ಣಯ್ಯಬುಲಾವು ಕೊಟ್ಟರು.
ಡಿಸೆಂಬರ್ 30ನೇ ತಾರೀಕಿನೊಳಗೆ ಜನತಾ ಪರಿವಾರದ ವಿಲೀನಕ್ಕೆ ಜಾತ್ಯತೀತ ಜನತಾ ದಳದ ನಾಯಕ ಎಚ್.ಡಿ.ದೇವೇಗೌಡರು ಸೂತ್ರ ಹೊಸೆಯಲಿ. ಇಲ್ಲವಾದರೆ ಪಕ್ಷವನ್ನು ಬೇರೆ ರೀತಿಯಲ್ಲಿ ಬಲ ಪಡಿಸುವ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ನಾಗೇಗೌಡ ಹೇಳಿದರು.
ಎಐಪಿಜೆಡಿಯ ಬಿ.ಸೋಮಶೇಖರ್, ಎಚ್.ಎನ್.ನಾಗೇಗೌಡ, ಎಂ.ರಘುಪತಿ, ಬಸವರಾಜ ಬೊಮ್ಮಾಯಿ ಹಾಗೂ ರೈತ ಸಂಘದ ನಾಯಕರಾದ ಎಚ್.ಆರ್.ಬಸವರಾಜಪ್ಪ, ಸಿ.ಡಿ.ಬಸವರಾಜಪ್ಪ, ಸಿ.ಡಿ. ಮಹಾದೇವಪ್ಪ ಮತ್ತು ಕೆ.ಬೋರಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications