ರೈತರ ಸಾವಿಗೆ ಏನು ಕಾರಣ? ಮಂಡ್ಯಜಿಲ್ಲಾ ಸಮೀಕ್ಷೆ ಹೇಳುತ್ತದೆ..
ರೈತರ ಸಾವಿಗೆ ಏನು ಕಾರಣ? ಮಂಡ್ಯಜಿಲ್ಲಾ ಸಮೀಕ್ಷೆ ಹೇಳುತ್ತದೆ..
ಜವಾಹರ್ಲಾಲ್ ರಾಷ್ಟ್ರೀಯ ಯುವ ಕೇಂದ್ರದಿಂದ ಸಮೀಕ್ಷೆ
ಮಂಡ್ಯ ಜಿಲ್ಲೆಯ 18 ಹಳ್ಳಿಗಳಲ್ಲಿ ವ್ಯಾಪಕ ಅಧ್ಯಯನ ನಡೆಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರೊಂದಿಗೆ ಹಾಗೂ ಹಳ್ಳಿಗಳ ಮುಖ್ಯಸ್ಥರೊಂದಿಗಿನ ಮಾತುಕತೆ ನಡೆಸಿದ ನಂತರ ಈ ಅಭಿಪ್ರಾಯಕ್ಕೆ ಬರಲಾಯಿತು ಎಂದು ಯುವಕೇಂದ್ರದ ಅಶ್ವಿನ್ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಯಾಂದು ಆತ್ಮಹತ್ಯೆ ಪ್ರಕರಣದಲ್ಲೂ , ಸಾವಿಗೆ ಶರಣಾದ ರೈತ 10 ಸಾವಿರ ರುಪಾಯಿಯಿಂದ 1 ಲಕ್ಷ ರುಪಾಯಿಯವರೆಗೆ ಸಾಲ ಮಾಡಿರುವುದು ಕಂಡುಬಂದಿದೆ. ಬೆಳೆಹಾನಿಯಿಂದ ಈ ಸಾಲವನ್ನು ತೀರಿಸಲು ಸಾಧ್ಯವಾಗದೆ, ಬಡ್ಡಿಯ ಮೇಲೆ ಬಡ್ಡಿ ಸೇರಿ ಬೆಳೆಯುತ್ತಿರುವ ಸಾಲದಿಂದ ಕಂಗೆಟ್ಟು ನಿರಾಶರಾದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕನ್ನಂಬಾಡಿ ಕಟ್ಟೆಯ ನೀರನ್ನು ಒಕ್ಕಲಿಗಾಗಿ ಆಶ್ರಯಿಸಿದ ರೈತರು ಕಳೆದ ಮೂರು ವರ್ಷಗಳಿಂದ ನೀರಿನ ಕೊರತೆ ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಮೀಕ್ಷೆಯ ಸಂದರ್ಭದಲ್ಲಿ - ಸಾಲ ಮನ್ನಾ ಮಾಡುವಂತೆ, ಸುಲಭ ಬೆಲೆಗೆ ಬೀಜ ಹಾಗೂ ಕೀಟನಾಶಕ ಒದಗಿಸುವಂತೆ ಮತ್ತು ಬೆಳೆವಿಮೆ ಸೌಲಭ್ಯ ಕಲ್ಪಿಸುವಂತೆ ರೈತರು ಸರ್ಕಾರವನ್ನು ಕೋರಿದ್ದಾರೆ.
ಸಂತ್ರಸ್ತ ರೈತರ ನೆರವಿಗೆ ಧಾವಿಸುವಂತೆ ನೆಹರು ಯುವಕಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications