ಬೆಂಗಳೂರಲ್ಲಿ ರಸ್ತೆ ಅಪಘಾತದಲ್ಲಿ ಪ್ರತಿವರ್ಷ 800 ಜನರ ಬಲಿ
ಬೆಂಗಳೂರಲ್ಲಿ ರಸ್ತೆ ಅಪಘಾತದಲ್ಲಿ ಪ್ರತಿವರ್ಷ 800 ಜನರ ಬಲಿ
ಟ್ರಾಫಿಕ್ ಪೊಲೀಸ್ ಇಲಾಖೆಯಿಂದ 15ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
- ಪ್ರತಿ ವರ್ಷ ರಸ್ತೆ ಅಪಘಾತಕ್ಕೆ 800 ಮಂದಿ ಬಲಿ.
- 7 ಸಾವಿರದಿಂದ 8 ಸಾವಿರ ಮಂದಿಗೆ ಗಾಯ.
ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಟ್ರಾಫಿಕ್ ಪೊಲೀಸರೊಂದಿಗೆ ವಿದ್ಯಾರ್ಥಿಗಳೂ ಕೈಜೋಡಿಸಿದ್ದಾರೆ. ಜ.5ರ ಸೋಮವಾರ ಸುಮಾರು 100 ಶಾಲೆಗಳ 8ರಿಂದ 10 ಸಾವಿರ ವಿದ್ಯಾರ್ಥಿಗಳು ರ್ಯಾಲಿ ನಡೆಸಿದರು. ಮೂರು ಗುಂಪುಗಳಲ್ಲಿ ಹೊರಟ ಈ ರ್ಯಾಲಿಯ ಉದ್ದೇಶ ಜನರಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವುದು.
ರಸ್ತೆ ಸುರಕ್ಷತಾ ಸಪ್ತಾಹದ ಕುರಿತು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಾಷಣ, ರಸಪ್ರಶ್ನೆ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನೂ ಪೊಲೀಸ್ ಇಲಾಖೆ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಮೂಡವ ಅರಿವು ಅವರ ಅಪ್ಪಅಮ್ಮಂದಿರಿಗೂ ಮುಟ್ಟುತ್ತದೆ ಎನ್ನುವುದು ಇಖೆಯ ಲೆಕ್ಕಾಚಾರವಿರಬಹುದು ?
(ಇನ್ಫೋ ವಾರ್ತೆ)
Post your views
ಮುಖಪುಟ / ಬೆಂಗಳೂರು ಡೈರಿ












Click it and Unblock the Notifications