ಛಾಪ ಪಾಪ ಗದ್ದಲ: ಸದನದಲ್ಲಿ ನೆಲೆ ಕಳಕೊಂಡ ಬಿಜೆಪಿ ಸದಸ್ಯರು
ಛಾಪ ಪಾಪ ಗದ್ದಲ: ಸದನದಲ್ಲಿ ನೆಲೆ ಕಳಕೊಂಡ ಬಿಜೆಪಿ ಸದಸ್ಯರು
ಸಂಪು ಹೂಡಿದ ಬಿಜೆಪಿಯ 25 ಸದಸ್ಯರು 1 ದಿನದ ಮಟ್ಟಿಗೆ ಸದನದಿಂದ ಅಮಾನತು
ಸತತ ನಾಲ್ಕನೇ ದಿನವೂ ಸದನ ಆರಂಭವಾಗುತಿದ್ದಂತೆಯೇ ಬಿಜೆಪಿ ಶಾಸಕರುಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಧರಣಿ ಮುಂದುವರೆಸಿದರು. ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿಕೊಂಡು ಸದನದ ಬಾವಿಗಿಳಿದಿದ್ದ ಬಿಜೆಪಿ ಶಾಸಕರು, ಧರಣಿ ನಿಲ್ಲಿಸಿ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಸಭಾಪತಿ ವೆಂಕಟಪ್ಪನವರು ಮಾಡಿದ ಸತತ ಮನವಿಯನ್ನು ಪುರಸ್ಕರಿಸಲಿಲ್ಲ.
‘ಈ ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ತಮ್ಮ ಬಳಿ ಸಂಬಂಧ ಪಟ್ಟ ಸಾಕ್ಷ್ಯಪುರಾವೆಗಳಿದ್ದರೆ ಅವರಿಗೆ ಒಪ್ಪಿಸಿ ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ಹೇಳಿದರು. ಬೇಗ್ ಸಂಪುಟ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಅವರು ಹಜ್ ಯಾತ್ರೆಯಲ್ಲಿದ್ದಾರೆ ಎಂದ ಸಚಿವ ಚಂದ್ರೇಗೌಡ- ಬೇಗ್ ಬಂಧನದ ಒತ್ತಾಯಕ್ಕೆ ಸಕಾರಣ ನೀಡುವಂತೆ ಬಿಜೆಪಿ ಸದಸ್ಯರನ್ನು ಒತ್ತಾಯಿಸಿದರು.
ಚಂದ್ರೇಗೌಡ ಅವರ ಮಾತಿಗೆ ಸಮಾಧಾನಗೊಳ್ಳದೆ ಧರಣಿ ಮುಂದುವರಿಸಿದ ಬಿಜೆಪಿ ಶಾಸಕರನ್ನು ಸದನದಿಂದ ಹೊರನಡೆಯುವಂತೆ ಸಭಾಪತಿಯವರು ವಿನಂತಿಸಿದರು. ಬಿಜೆಪಿ ಶಾಸಕರು ಯಾವುದನ್ನೂ ಲೆಕ್ಕಿಸದಿದ್ದಾಗ ಬಿಜೆಪಿಯ 25 ಸದಸ್ಯರನ್ನು 1 ದಿನದ ಮಟ್ಟಿಗೆ ಸದನದಿಂದ ಅಮಾನತುಗೊಳಿಸಿದರು. ಸಭಾಪತಿಗಳ ಆದೇಶದ ಮೇರೆಗೆ ಬಿಜೆಪಿಯ ಸದಸ್ಯರನ್ನು ರಕ್ಷಣಾದಳ ಸದನದಿಂದ ಎತ್ತಿ ಹೊರಸಾಗಿಸಿತು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications