‘ಅರಸು ಸಂಯುಕ್ತ ಪಕ್ಷ’ : ಇದು ಶ್ರೀಹರಿ ಎಲ್.ಖೋಡೆ ಸಮಯ
‘ಅರಸು ಸಂಯುಕ್ತ ಪಕ್ಷ’ : ಇದು ಶ್ರೀಹರಿ ಎಲ್.ಖೋಡೆ ಸಮಯ
ರಾಜ್ಯದಲ್ಲಿ ಮತ್ತೊಂದು ರಾಜಕೀಯ ಪಕ್ಷದ ಉದಯ
ಉದ್ಯಮಿ ವಿಜಯ್ ಮಲ್ಯ ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಿದ್ದಾಯಿತು ; ಉದ್ಯಮಿ ವಿಜಯ ಸಂಕೇಶ್ವರ ಪಕ್ಷ ಕಟ್ಟಿ ರಾಜಕೀಯ ಮಾಡುತ್ತಿದ್ದಾರೆ; ಈಗ ಮತ್ತೊಬ್ಬ ಉದ್ಯಮಿ ಶ್ರೀಹರಿ ಖೋಡೆ ಅವರ ರಾಜಕಾರಣದ ಸರದಿ.
ರಾಜಕೀಯದಲ್ಲಿ ವೃತ್ತಿಪರತೆಯನ್ನು ತರುವ ಘೋಷಣೆಯಾಂದಿಗೆ- ಅರಸು ಸಂಯುಕ್ತ ಪಕ್ಷ ಎನ್ನುವ ನೂತನ ಪಕ್ಷವನ್ನು ಉದ್ಯ ಶ್ರೀಹರಿ ಎಲ್.ಖೋಡೆ ಜ.16ರ ಶುಕ್ರವಾರ ಉದ್ಘಾಟಿಸಿದರು. ಅರಮನೆ ರಸ್ತೆಯಲ್ಲಿನ ಪಕ್ಷದ ಕಚೇರಿಯಲ್ಲಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ನೂತನ ಪಕ್ಷವನ್ನು ಖೋಡೆ ಆರಂಭಿಸಿದರು. ಬಾಣದ ಆಧಾರದ ಮೇಲೆ ನಿಂತಿರುವ ತಕ್ಕಡಿ ಖೋಡೆ ಅವರ ಪಕ್ಷದ ಗುರುತು.
ಪಕ್ಷದ ಉದ್ಘಾಟನೆಯ ನಂತರ ಅಭಿಮಾನಿಗಳೊಂದಿಗೆ ವಿಧಾನಸೌಧಕ್ಕೆ ತೆರಳಿದ ಖೋಡೆ- ವಿಧಾನಸೌಧದ ಮುಂಭಾಗದಲ್ಲಿನ ದೇವರಾಜು ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಮುಂಬರುವ ಚುನಾವಣೆಗಳಲ್ಲಿ ಅರಸು ಸಂಯುಕ್ತ ಪಕ್ಷ ಸ್ಪರ್ಧಿಸಲಿದೆ. ರಾಜ್ಯಾದ್ಯಂತ ಪಕ್ಷದ ಸಂಘಟನೆಯ ಕಾರ್ಯ ನಡೆಯಲಿದೆ. ಸೂಕ್ತ ನಾಯಕರನ್ನು ಪಕ್ಷವು ಗುರ್ತಿಸಲಿದ್ದು , ಆ ನಾಯಕರನ್ನು ಚುನಾವಣೆಗೆ ನಿಲ್ಲುವಂತೆ ಮನ ಒಲಿಸಲಾಗುವುದು. ಸ್ಪರ್ಧಿಗಳ ಚುನಾವಣೆಯ ಖರ್ಚನ್ನು ಪಕ್ಷವೇ ಭರಿಸಲಿದೆ ಎಂದು ಪಕ್ಷದ ಉದ್ಘಾಟನೆಯ ನಂತರ ಖೋಡೆ ಸುದ್ದಿಗಾರರಿಗೆ ತಿಳಿಸಿದರು.
ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಗಳನ್ನು ಖೋಡೆ ಸಾರಾಸಗಟಾಗಿ ತಳ್ಳಿಹಾಕಿದರು. ದೇವರಾಜ ಅರಸು ಅವರ ಪುತ್ರಿ ಭಾರತಿ ಅರಸು ಹಾಗೂ ಅಖಿಲ ಕರ್ನಾಟಕ ಕ್ಷತ್ರಿಯ ಮಹಾಸಭಾದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications