ಕಾವೇರಿಉಸ್ತುವಾರಿಸಮಿತಿ ಸಭೆಯಲ್ಲಿ ನೀರಿಗೆ ತಮಿಳ್ನಾಡು ಮನವಿ
ಕಾವೇರಿಉಸ್ತುವಾರಿಸಮಿತಿ ಸಭೆಯಲ್ಲಿ ನೀರಿಗೆ ತಮಿಳ್ನಾಡು ಮನವಿ
ಕರ್ನಾಟಕದ ಪ್ರಮಾಣ ಪತ್ರಕ್ಕೆ ಉತ್ತರಿಸಲು ಜಯಾಗೆ 2 ವಾರ ಗಡುವು
ತಮಿಳುನಾಡು ಮುಖ್ಯ ಕಾರ್ಯದರ್ಶಿ ಲಕ್ಷ್ಮಿ ಪ್ರಾಣೇಶ್ ಅವರು ಸೋಮವಾರದ ಉಸ್ತುವಾರಿ ಸಮಿತಿ ಸಭೆಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದರು. ತಮಿಳುನಾಡಿನ ಕೋರಿಕೆಗೆ ಸ್ಪಂದಿಸಿದ ಕರ್ನಾಟಕ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ್ ಅವರು ಈ ಮನವಿಯನ್ನು ಸರ್ಕಾರದ ಗಮನಕ್ಕೆ ತರುವದಾಗಿ ಹೇಳಿದರು.
ಗಣರಾಜ್ಯೋತ್ಸವ ದಿನದ ಒಳಗೆ ನೀರು ಬಿಡುಗಡೆಯ ಕುರಿತು ತೀರ್ಮಾನ ಕೈಗೊಳ್ಳುವಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಜಲ ಸಂಪನ್ಮೂಲ ಕಾರ್ಯರ್ದಿ ವಿ.ಕೆ.ದುಗ್ಗಲ್ ಕರ್ನಾಟಕದ ಬಿ.ಎಸ್.ಪಾಟೀಲ್ ಅವರಿಗೆ ಸೂಚಿಸಿದರು. ಉಭಯ ರಾಜ್ಯಗಳಲ್ಲಿನ ಮಳೆಯ ಪ್ರಮಾಣ, ಬರ ಪರಿಸ್ಥಿತಿ, ಇನ್ನಿತರೆ ಅಂಶಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಜಯಲಲಿತಾಗೆ ಗಡುವು : ಹಗರಣಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ತನಿಖೆ ನಡೆಸಲು ಯಾವುದೇ ತೊಡಕು ಉಂಟಾಗದು ಎಂದು ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಸುಪ್ರಿಂಕೋರ್ಟ್ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸೋಮವಾರ ಸೂಚಿಸಿತು.
ಕಾವೇರಿ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ತನಿಖೆ ನಡೆಸಲು ಅಡ್ಡಿ ಉಂಟಾಗಬಹುದು ಎಂದು ಜಯಲಲಿತಾ ಅವರು ಸುಪ್ರಿಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು , ಈ ಅರ್ಜಿಗೆ ಪ್ರತಿಯಾಗಿ ಸಕಲ ರಕ್ಷಣೆಯನ್ನೂ ಒದಗಿಸುವುದಾಗಿ ಕರ್ನಾಟಕ ಸರ್ಕಾರ ಉತ್ತರ ನೀಡಿತ್ತು . ಕರ್ನಾಟಕ ಸರ್ಕಾರದ ಉತ್ತರವನ್ನು ಪರಿಶೀಲಿಸಿದ ಸುಪ್ರಿಂಕೋರ್ಟ್ನ ನ್ಯಾಯಪೀಠ ಇನ್ನೆರಡು ವಾರಗಳಲ್ಲಿ ಈ ಕುರಿತು ಉತ್ತರ ನೀಡುವಂತೆ ಜಯಲಲಿತಾ ಅವರಿಗೆ ಆದೇಶಿಸಿತು.
(ಪಿಟಿಐ)
ಮುಖಪುಟ / ಕಾವೇರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications