Get Updates
Get notified of breaking news, exclusive insights, and must-see stories!

ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ ಸಾಧ್ಯತೆಯಿಲ್ಲ -ಎಸ್ಸೆಂ.ಕೃಷ್ಣ

ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ ಸಾಧ್ಯತೆಯಿಲ್ಲ -ಎಸ್ಸೆಂ.ಕೃಷ್ಣ
ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತು ಹೈಕಮಾಂಡ್‌ನೊಂದಿಗೆ ಚರ್ಚೆ...

ಬೆಂಗಳೂರು : ರಾಜ್ಯ ವಿಧಾನಸಭೆಯ ಚುನಾವಣೆಗಳು ಅವಧಿಗೆ ಮುಂಚೆ ನಡೆಯುವ ಸಾಧ್ಯತೆಗಳನ್ನು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ನಿರಾಕರಿಸಿದ್ದಾರೆ.

ಲೋಕಸಭಾ ಚುನಾವಣೆಗಳ ಜೊತೆಯಲ್ಲಿಯೇ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಕೃಷ್ಣ - ಈ ವದಂತಿಗಳು ಸತ್ಯಕ್ಕೆ ದೂರವಾದವು ಎಂದು ಬಣ್ಣಿಸಿದರು. ಜ.19ರ ಸೋಮವಾರ ಬೆಂಗಳೂರಿನಲ್ಲಿ ನಡೆದ ಹಿರಿಯ ಪೋಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ವಿಧಾನಸಭೆ ಚುನಾವಣೆಯು ಸೆಪ್ಟಂಬರ್‌ ತಿಂಗಳಿನಲ್ಲಿ ನಡೆಯಲಿದೆ ಎಂದ ಕೃಷ್ಣ , ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತು ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು. ರಾಜ್ಯ ವಿಧಾನಸಭೆಯ ಚುನಾವಣೆಯ ಅವಧಿಯ ಬಗ್ಗೆ ಕೇಂದ್ರ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿರುವಿರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಷ್ಣ- ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿರುವೆ ಎಂದಷ್ಟೇ ಉತ್ತರಿಸಿದರು.

(ಪಿಟಿಐ)

ಮುಖಪುಟ / ಕೃಷ್ಣಗಾರುಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+